Thursday, October 26, 2023

12 ದಿನಗಳ ಬಳಿಕ ಮತ್ತೆ ದ.ಕ.ಜಿಲ್ಲೆಯಲ್ಲಿ ಕೊರೊನ ಪಾಸಿಟಿವ್

Must read

ಬಂಟ್ವಾಳ: ಕಳೆದ 12 ದಿನದಿಂದ ನೆಮ್ಮದಿಯಿಂದ ಇದ್ದ ದಕ್ಷಿಣ ಕನ್ನಡ ಜಿಲ್ಲೆಗೆ ಮತ್ತೆ ಆತಂಕ ಶುರುವಾಗಿದೆ. ದೆಹಲಿಗೆ ತೆರಳಿದ್ದ ಉಪ್ಪಿನಂಗಡಿ ನಿವಾಸಿಗೆ ಕೊರೋನಾ ಪಾಸಿಟಿವ್.

ದ.ಕ ಜಿಲ್ಲೆಯ ಪುತ್ತೂರು ತಾಲೂಕಿನ ಉಪ್ಪಿನಂಗಡಿ ನಿವಾಸಿ ಮಾ.21ರಂದು ನಿಜಾಮುದ್ದೀನ್ ರೈಲಿನಲ್ಲಿ ಮಂಗಳೂರಿಗೆ ಆಗಮಿಸಿದ್ದರು. ಫೋನ್ ಟವರ್ ಲೊಕೇಶನ್ ಆಧಾರದಲ್ಲಿ ವ್ಯಕ್ತಿಯನ್ನು ಪತ್ತೆ ಮಾಡಿದ್ದ ಜಿಲ್ಲಾಡಳಿತ. ಆ ವ್ಯಕ್ತಿಯನ್ನ ಕ್ವಾರಂಟೈನ್ ಮಾಡಿ ಗಂಟಲ ದ್ರಾವಣ ಪರೀಕ್ಷೆಗೆ ಕಳುಹಿಸಲಾಗಿತ್ತು. ಇದೀಗ ಬಂದ ವರದಿಯಲ್ಲಿ 39 ವರ್ಷದ ಯುವಕನಿಗೆ ಕೊರೋನಾ ಪಾಸಿಟಿವ್ ಕಂಡು ಬಂದಿದೆ.

ಮಾ.23ರಿಂದಲೇ ಮಂಗಳೂರಿನಲ್ಲಿ ಕ್ವಾರೆಂಟೈನ್ ನಲ್ಲಿರುವ ವ್ಯಕ್ತಿ. ಮಾ.20ರಂದು ನಿಜಾಮುದ್ದೀನ್ ರೈಲಿನಲ್ಲಿ ಬಂದು ಮಾ.21ರಂದು ಮಂಗಳೂರಿಗೆ ಆಗಮಿಸಿದ್ದ. ನಿಝಾಮುದ್ದೀನ್ ಏರಿಯಾದ ಟವರ್ ಲೊಕೇಶನ್ ಆಧಾರದಲ್ಲಿ ಈ ವ್ಯಕ್ತಿ ಸೇರಿ 26 ಜನ ಕ್ವಾರಂಟೈನ್ ನಲ್ಲಿದ್ದರು.

ತಬ್ಲೀಕ್ ಮಸೀದಿ ತೆರಳಿದ ಮತ್ತು ಆ ಪ್ರದೇಶದಲ್ಲಿ ಸುತ್ತಾಡಿದ ಜಿಲ್ಲೆಯ 29 ಮಂದಿ ಕ್ವಾರಂಟೈನ್ ಮಾಡಲಾಗಿತ್ತು. ಈತನ ಜೊತೆ ತೆರಳಿದ್ದ ತುಂಬೆ ಗ್ರಾಮದ ವ್ಯಕ್ತಿಗೆ ಎ.4ರಂದೇ ಕೊರೋನ ಪಾಸಿಟಿವ್ ಆಗಿತ್ತು.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ 12 ದಿನದಿಂದ ಒಂದೇ ಒಂದು ಕೇಸ್ ಕೂಡ ಪತ್ತೆಯಾಗಿರಲಿಲ್ಲ.

More articles

Latest article