ಬಂಟ್ವಾಳ: ಎರಡು ತಿಂಗಳ ಪಡಿತರ ಕೊಡಬೇಕು ಅಂತ ಸಿಎಂ ನಿರ್ಧಾರ ಮಾಡಿದ ಹಿನ್ನೆಲೆಯಲ್ಲಿ ಎಲ್ಲಾ ನ್ಯಾಯಬೆಲೆ ಅಂಗಡಿಗಳಲ್ಲಿ ರೇಷನ್ ನೀಡಲಾಗ್ತಿದೆ ಎಂದು ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ಸಚಿವ ಗೋಪಾಲಯ್ಯ ಸ್ಪಷ್ಟಪಡಿಸಿದ್ದಾರೆ.
ಇದೇ ಮೊದಲ ಬಾರಿಗೆ ಎರಡ ತಿಂಗಳ ಪಡಿತರವನ್ನು ಇಡೀ ರಾಜ್ಯಾದ್ಯಂತ ಶೇ 90 ಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಆಹಾರ ದಾನ್ಯಗಳ ವಿತರಣೆ ಮಾಡಲಾಗಿದೆ. ಬಿ.ಪಿ .ಎಲ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ನಾಳೆಯಿಂದ ಪ್ರತಿ ತಿಂಗಳಂತೆ 3 ತಿಂಗಳು 10 ಕೆ.ಜಿ ಅಕ್ಕಿ ನೀಡಲಾಗುವುದು. ಉಜ್ವಲ ಮತ್ತು ಸಿಎಂ ಅನಿಲ ಭಾಗ್ಯ ಯೋಜನೆಯನ್ನು ಮೂರು ತಿಂಗಳಿಗೆ ವಿಸ್ತರಿಸಲಾಗುತ್ತದೆ. ಮೇ 1ರಿಂದ ಎಲ್ಲ ಪಡಿತರ ಅಂಗಡಿಗಳಲ್ಲಿ 10ಕೆಜಿ ಅಕ್ಕಿ , 1ಕೆಜಿ ತೊಗರಿ ಬೇಳೆ ವಿತರಣೆ ಮಾಡಲಾಗುತ್ತದೆ
ಬಿ.ಪಿ.ಎಲ್ ಕಾರ್ಡ್ ಗೆ ಅರ್ಜಿ ಹಾಕಿದವರಿಗೆ ಪ್ರತಿ ತಿಂಗಳು 10 ಕೆ.ಜಿ ಅಕ್ಕಿಯನ್ನ ಮೂರು ತಿಂಗಳು ಉಚಿತವಾಗಿ ವಿತರಣೆ ಮಾಡಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.