






ಬಂಟ್ವಾಳ: ಕೊರೊನಾ ಲಾಕ್ ಡೌನ್ ನ ಮಧ್ಯೆ ಚಿರತೆಯೊಂದು ಬಾವಿಗೆ ಬಿದ್ದು ಮೇಲಕ್ಕೆ ಬರಲಾಗದೆ ಹೊರಳಾಡುತ್ತಿದ್ದ ಘಟನೆ ಬಂಟ್ವಾಳ ತಾಲೂಕಿನ ತುಂಬೆ ಸಮೀಪದ ಮಜಿ ಎಂಬಲ್ಲಿ ನಡೆದಿದೆ.
ಮಜಿ ಮೋನಪ್ಪ ಎಂಬವರ ಜಮೀನಿನಲ್ಲಿ ರುವ ಸುಮಾರು 6. ಅಡಿ ಆಳವಾದ ಬಾವಿಗೆ ರಾತ್ರಿ ಹೊತ್ತಿನಲ್ಲಿ ಚಿರತೆ ಬಿದ್ದಿತ್ತು.
ರಾತ್ರಿ ಹೊತ್ತಿನಲ್ಲಿ ಬಾವಿ ಕಾಣದೆ ಒಳಗೆ ಬಿದ್ದಿರಬೇಕು ಎಂದು ಅಂದಾಜಿಸಲಾಗಿದೆ.
ಕೊನೆಗೆ ಅರಣ್ಯ ಇಲಾಖೆ, ಅಗ್ನಿ ಶಾಮಕದಳ ಸಿಬ್ಬಂದಿ ಹಾಗೂ ಪೋಲೀಸರು ಕಾರ್ಯಚರಣೆ ನಡೆಸಿ ಸುರಕ್ಷಿತವಾಗಿ ಮೇಲಕ್ಕೆತ್ತಿದ ಘಟನೆ ನಡೆದಿದೆ.
ಸುಮಾರು ಎರಡು ವರ್ಷ ಮರಿ ಚಿರತೆ ಇದಾಗಿದೆ ಎಂದು ಪರೀಕ್ಷೆ ನಡೆಸಿದ ವೈಧ್ಯರು ತಿಳಿಸಿದ್ದಾರೆ.
ಸುರಕ್ಷಿತ ವಾಗಿರುವ ಮರಿಯನ್ನು ಸುರಕ್ಷಿತ ಸ್ಥಳಕ್ಕೆ ರವಾನಿಸಿದ್ದಾರೆ.
ವಲಯ ಅರಣ್ಯಾಧಿಕಾರಿ ಶ್ರೀಧರ್, ಪ್ರೀತಂ, ಜಿತೇಶ್, ಬಾಸ್ಕರ್, ವಿನಯ್, ಬಂಟ್ವಾಳ ಗ್ರಾಮಾಂತರ ಎಸ್.ಐ.ಪ್ರಸನ್ನ, ಟ್ರಾಫಿಕ್ ಎಸ್.ಐ.ರಾಜೇಶ್ ಕೆ.ವಿ.ಸಿಬ್ಬಂದಿ ಜನಾರ್ಧನ, ಕಿರಣ್ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಗಳು ಕಾರ್ಯಚರಣೆ ನಡೆಸಿದ್ದರು.





