ಮಂಗಳೂರು: ಶಾಸಕ ಝಮೀರ್ ಅಹ್ಮದ್ ರಿಗೆ ಕ್ವಾರಂಟೈನ್ ವಿಚಾರದ ಬಗ್ಗೆ
ನಾನು ಆರೋಗ್ಯ ಸಚಿವರ ಜೊತೆಗೆ ಮಾತನಾಡಿದ್ದೇನೆ
ಆರೋಗ್ಯ ಸಚಿವರು ಆ ಕುರಿತು ಪರಿಶೀಲಿಸುತ್ತಿದ್ದಾರೆ ಎಂದು ಉಜಿರೆಯಲ್ಲಿ ಗೃಹಸಚಿವ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ.
ರಾಜ್ಯದಲ್ಲಿ ಲಾಕ್ ಡೌನ್ ಸಡಿಲಿಕೆ ವಿಚಾರ ಕೇಂದ್ರ ಸರ್ಕಾರದ ಆದೇಶದಂತೆ ಲಾಕ್ಡೌನ್ ನಿಯಮದಲ್ಲಿ ಸಡಿಲಿಕೆ ಮಾಡಲಾಗುತ್ತದೆ.
ಕೆಲ ಕ್ಷೇತ್ರಗಳಲ್ಲಿ ಸಡಿಲಿಕೆ ಮಾಡಿದ್ದೇವೆ ಎಂದು ಅವರು ಹೇಳಿದ್ದಾರೆ.
ಕರ್ನಾಟಕದಲ್ಲಿ ಕೊರೊನಾ ನಿಯಂತ್ರಣಕ್ಕೆ ಬರುವ ಲಕ್ಷಣಗಳು ಕಾಣುತ್ತಿದೆ ಎಂದವರು ಅವರು ಹೇಳಿದ್ದಾರೆ.
ಎ.27 ಕ್ಕೆ ಮತ್ತೆ ಪ್ರಧಾನಿ ಸಿಎಂ ಜೊತೆಗೆ ವೀಡಿಯೋ ಕಾನ್ಪರೆನ್ಸ್ ನಡೆಸಲಿದ್ದಾರೆ ಎಂದು ಅವರು ತಿಳಿಸಿದರು.
ಮೇ ಮೂರರವರೆಗೆ ಲಾಕ್ ಡೌನ್ ಇರುತ್ತದೆ ಎಂಬುದನ್ನು ಸ್ಪಷ್ಟ ಪಡಿಸಿದ್ದಾರೆ.