Friday, April 5, 2024

ಪಾಲ್ಗರ್ ಸಂತರ ಹತ್ಯೆ: ಒಡಿಯೂರು ಶ್ರೀಗಳ ಖಂಡನೆ

ಒಡಿಯೂರು: ಮಹಾರಾಷ್ಟ್ರದ ಪಾಲ್ಗರ್ ಎಂಬಲ್ಲಿ ಅಮಾನುಷವಾಗಿ ಈರ್ವರು ಸಂತರ ಹತ್ಯೆ ನಡೆದಿರುವುದು ಖಂಡನೀಯ. ಭಾರತ ದೇಶದ ಮೌಲ್ಯವೆಂದರೆ ಸಾಧು-ಸಂತರು. ಸದುದ್ದೇಶಕ್ಕಾಗಿ ಸಂಚರಿಸುತ್ತಿದ್ದ ವೇಳೆ ಈ ಘಟನೆ ಸಂಭವಿಸಿರುವುದು ದುಃಖಕರ. ಸಂತರ ಹತ್ಯೆ ಎಂದರೆ ಸಂಸ್ಕøತಿಯ ಹತ್ಯೆಯಂತೆ. ಬದುಕಿ-ಬದುಕಬಿಡುವ ಸಂತರ ಬದುಕನ್ನೇ ಕಸಿದುಕೊಳ್ಳುವುದು ಉಚಿತವಲ್ಲ. ಕಾನೂನನ್ನು ಕೈಗೆತ್ತಿಕೊಳ್ಳುವುದು ಅಪರಾಧ. ಇಂತಹ ಕೃತ್ಯಗೈದ ದುಷ್ಟರಿಗೆ ಕೂಡಲೇ ಕಠಿಣ ಶಿಕ್ಷೆಯಾಗಬೇಕು. ಸಾಧು-ಸಂತರು ಎಚ್ಚೆತ್ತುಕೊಂಡು ಇದರ ಬಗ್ಗೆ ಕೂಡಲೇ ಗಮನಹರಿಸಬೇಕು. ಸರಕಾರವು ಕೂಲಂಕುಷವಾಗಿ ತನಿಖೆ ನಡೆಸಿ ನ್ಯಾಯ ದೊರಕಿಸಬೇಕಾಗಿ ಎಂದು ಒಡಿಯೂರು ಶ್ರೀಗಳ  ವಿನಂತಿಸಿದರು.

More from the blog

ನೀತಿ ಸಂಹಿತೆ ಉಲ್ಲಂಘನೆ : ಕೋಟಾ ಶ್ರೀನಿವಾಸ್‌ ಪೂಜಾರಿಗೆ ಕೋರ್ಟ್‌ ಸಮನ್ಸ್‌

ಬೆಂಗಳೂರು: ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್‌ ಪೂಜಾರಿ ಅವರಿಗೆ ಕೋರ್ಟ್‌ ಸಮನ್ಸ್‌ ಜಾರಿ ಮಾಡಿದೆ. ಕೋಟಾ ಶ್ರೀನಿವಾಸ ಪೂಜಾರಿ, ಗುರ್ಮೆ ಸುರೇಶ್ ಶೆಟ್ಟಿ, ಲಾಲಾಜಿ ಮೆಂಡನ್ ಹಾಗೂ ಶಾಲಾ ಆಡಳಿತ ಮಂಡಳಿಗೆ ಜನಪ್ರತಿನಿಧಿಗಳ ವಿಶೇಷ...

ಸಾವು ಗೆದ್ದು ಬಂದ ಸಾತ್ವಿಕ್ ; ಸತತ 20 ಗಂಟೆಗಳ ಕಾರ್ಯಾಚರಣೆ ಯಶಸ್ವಿ

ವಿಜಯಪುರ: ಕೊಳವೆ ಬಾವಿಗೆ ಬಿದ್ದಿರುವ 2 ವರ್ಷದ ಕಂದ ಸಾತ್ವಿಕ್​​ನನ್ನು ಕೊನೆಗೂ ರಕ್ಷಣಾ ಪಡೆಯ ಸಿಬ್ಬಂದಿ ಹೊರ ತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ. ಇಂಡಿಯ ಲಚ್ಯಾನ ಗ್ರಾಮದ ತೋಟದಲ್ಲಿ ಆಟವಾಡುತ್ತಿದ್ದಾಗ ಮಗು ಕೊಳವೆ ಬಾವಿಗೆ ಬಿದ್ದಿತ್ತು. ಈ ಸಂಬಂಧ...

ಕಲ್ಲಡ್ಕ: ಖಾಸಗಿ ಬಸ್ಸಿಗೆ ಪಿಕಪ್ ಢಿಕ್ಕಿ: ಹಲವರಿಗೆ ಗಾಯ

ವಿಟ್ಲ: ವಿಟ್ಲ ಕಲ್ಲಡ್ಕ ರಸ್ತೆಯ ಗೋಳ್ತಮಜಲು ಎಂಬಲ್ಲಿ ಬಸ್ಸಿಗೆ ಪಿಕಪ್ ಮುಖಾಮುಖಿ ಢಿಕ್ಕಿಯಾಗಿ ಹಲವರು ಗಾಯಗೊಂಡಿದ್ದಾರೆ. ವಿಟ್ಲ ಕಡೆಗೆ ಕಾಂಕ್ರೀಟ್ ಮಿಕ್ಸರ್ ಯಂತ್ರವನ್ನು ಒಯ್ಯುತ್ತಿದ್ದ ಪಿಕಪ್ ಆಕಸ್ಮಿಕವಾಗಿ ವಿಟ್ಲದಿಂದ ಮಂಗಳೂರಿಗೆ ಸಾಗುತ್ತಿದ್ದ ಖಾಸಗಿ ಬಸ್ಸಿಗೆ...

ಕೊಳವೆ ಬಾವಿಗೆ ಬಿದ್ದ 2 ವರ್ಷದ ಕಂದಮ್ಮ : ರಕ್ಷಣೆಗೆ ಅರ್ಧ ಅಡಿಯಷ್ಟೇ ಬಾಕಿ

ವಿಜಯಪುರ: ಕೊಳವೆ ಬಾವಿಗೆ ಬಿದ್ದಿರುವ ಮಗು ಸಾತ್ವಿಕ ಸುರಕ್ಷಿತವಾಗಿದ್ದು, ರಕ್ಷಣಾ ಕಾರ್ಯಾಚರಣೆ ಅಂತಿಮ ಹಂತಕ್ಕೆ ಬಂದಿದೆ. ಮಗು ಸುರಕ್ಷಿತವಾಗಿದ್ದು, ಕಾರ್ಯಾಚರಣೆ ಆಶಾದಾಯಕವಾಗಿದೆ. 16 ಅಡಿ ಆಳದಲ್ಲಿರುವ ಸಾತ್ವಿಕ್ ರಕ್ಷಣೆಗಾಗಿ 22 ಅಡಿ ಆಳದವರೆಗೆ ಸುರಂಗ...