Sunday, October 22, 2023

ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಆಗ್ರಹ

Must read

ಬಂಟ್ವಾಳ: ಇಲ್ಲಿನ ಪುರಸಬಾ ವ್ಯಾಪ್ತಿಯ ಬಂಟ್ವಾಳ ಕಸಬಾ ಗ್ರಾಮದ ಬಂಟ್ವಾಳ ಪೇಟೆಯ ನಿವಾಸಿಗಳ ಬದುಕು ಸೀಲ್ ಡೌನ್ ನಿಂದಾಗಿ ಸಂಕಷ್ಟಕ್ಕೀಡಾಗಿದ್ದು, ಈ ಹಿನ್ನಲೆಯಲ್ಲಿ ಆ ನಿವಾಸಿಗಳ ಕಟ್ಟಡ ಮತ್ತು ಮನೆ ತೆರಿಗೆ, ವಿದ್ಯುತ್ ಮತ್ತು ನೀರಿನ ಬಿಲ್ ಹಾಗೂ ತ್ಯಾಜ್ಯ ಶುಲ್ಕ ಮನ್ನಾ ಮಾಡುವಂತೆ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್ ಪುರಸಭೆಯನ್ನು ಆಗ್ರಹಿಸಿದ್ದಾರೆ.
ಈ ಪ್ರದೇಶದಲ್ಲಿ ಕೊರೊನಾ ಸೊಂಕು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಲಾಕ್ ಡೌನ್ ನಂತರ ಸುಧೀರ್ಘ ದಿನಗಳ ಸೀಲ್ ಡೌನ್ ಮುಂದುವರೆದಿದೆ. ಆದರೆ ಈ ಪ್ರದೇಶದ ಜನರಿಗೆ ಯಾವುದೇ ಮೂಲಭೂತ ಸೌಲಭ್ಯಗಳು ದೊರೆತಿಲ್ಲ. ಇದರಿಂದಾಗಿ ಇಲ್ಲಿನ ಜನರಿಗೆ ದಿನನಿತ್ಯದ ಬದುಕು ನಿರ್ವಹಣೆ ಕಷ್ಟವಾಗಿದ್ದು, ಇಲ್ಲಿನ ನಿವಾಸಿಗಳ ಕಟ್ಟಡ ಮತ್ತು ಮನೆ ತೆರಿಗೆ, ವಿದ್ಯುತ್ ಮತ್ತು ನೀರಿನ ಬಿಲ್ ಹಾಗೂ ತ್ಯಾಜ್ಯ ಶುಲ್ಕ ಮನ್ನಾ ಮಾಡುವ ಮೂಲಕ ಪುರಸಭೆಯ ಇವರ ಸಂಕಷ್ಟಕ್ಕೆ ಸ್ಪಂದಿಸಬೇಕು ಎಂದು ಬೇಬಿ ಕುಂದರ್ ಒತ್ತಾಯಿಸಿದ್ದಾರೆ. ನಿಯೋಗದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್, ಜಿಲ್ಲಾ ಪಂಚಾಯತ್ ಸದಸ್ಯ ಪದ್ಮಶೇಖರ್ ಜೈನ್, ಮಾಜಿ ಬುಡಾ ಅಧ್ಯಕ್ಷ ಸದಾಶಿವ ಬಂಗೇರ, ಪೂರಾ ಸಭಾ ಸದಸ್ಯರಾದ ಜನಾರ್ದನ ಚೆಂಡ್ತಿಮರ್,ಗಂಗಾಧರ ಪೂಜಾರಿ ಉಪಸ್ಥಿತರಿದ್ದರು.

More articles

Latest article