ಬಂಟ್ವಾಳ: ಮೇ 21ರಂದು ರಾಷ್ಟ್ರವ್ಯಾಪ್ತಿ ಭಯೋತ್ಪಾದನೆ ವಿರೋಧಿ ದಿನಾಚರಣೆ ಅಂಗವಾಗಿ ಇಂದು ಗುರುವಾರ ತಹಶೀಲ್ದಾರ್ ರಶ್ಮಿ.ಎಸ್. ಆರ್ ಅವರ ನೇತೃತ್ವದಲ್ಲಿ ಬಂಟ್ವಾಳ ತಾಲೂಕು ಕಚೇರಿ ಸಿಬ್ಬಂದಿಗಳಿಂದ ಮಿನಿ ವಿಧಾನಸೌಧದಲ್ಲಿ ಪ್ರತಿಜ್ಞಾ ವಿಧಿ ಸ್ವೀಕರಿಸಲಾಯಿತು.
ಪಾಣೆಮಂಗಳೂರು ಹೋಬಳಿಯ ಕಂದಾಯ ನಿರೀಕ್ಷಕಾದ ರಾಮ ಕೆ ಪ್ರತಿಜ್ಞಾ ವಿಧಿ ಬೋಧಿಸಿದರು.ಇದೇ ಸಂದರ್ಭದಲ್ಲಿ
ಬಂಟ್ವಾಳ ತಹಶೀಲ್ದಾರ್ ಮಾತನಾಡಿ
ಸತ್ಯ, ಅಹಿಂಸೆ,ಸಹನೆಗಳ ದ್ಯೋತಕವಾದ ನಮ್ಮ ದೇಶದಲ್ಲಿ ಭಯೋತ್ಪಾದನೆ ಪ್ರೇರಿತ ಹಿಂಸೆಯು ಕೊನೆಯಾಗಲಿ ಎಂದು ಆಶಿಸಿದರು.
ಈ ಸಂದರ್ಭದಲ್ಲಿ ಉಪತಹಸೀಲ್ದಾರರು, ಶಿರಸ್ತೇದಾರರು,
ತಾಲೂಕು ಕಚೇರಿ ಸಿಬ್ಬಂದಿಗಳು , ಗ್ರಾಮ ಲೆಕ್ಕಾಧಿಕಾರಿಗಳು, ಗ್ರಾಮ ಸಹಾಯಕರು ಹಾಜರಿದ್ದರು.