ಬಂಟ್ವಾಳ: ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮುಂದಾದ ಯುವಕನೋರ್ವನನ್ನು ಈದುಲ್ ಫಿತ್ರ್ ಹಬ್ಬದ ಸಂಭ್ರಮದಲ್ಲಿದ್ದ ಯುವಕರ ತಂಡವೊಂದು ರಕ್ಷಿಸಲು ನದಿಗೆ ಹಾರಿ ಮಾನವೀಯತೆ ಮೆರೆದ ಘಟನೆ ಭಾನುವಾರ ಪಾಣೆಮಂಗಳೂರಿನಲ್ಲಿ ನಡೆದಿದೆ.
ಯಾವುದೋ ಕಾರಣಕ್ಕೆ ಮಾನಸಿಕವಾಗಿ ನೊಂದುಕೊಂಡಿದ್ದ ಕಲ್ಲಡ್ಕ ಕೊಳಕೀರು ನಿವಾಸಿ ನಿಶಾಂತ್ ಭಾನುವಾರ ಪಾಣೆಮಂಗಳೂರು ನೇತ್ರಾವತಿ ನದಿಗೆ ಹಾರಿದರು. ಈ ಸುದ್ದಿ ತಿಳಿಯುತ್ತಿದ್ದಂತೆಯೇ ಈದುಲ್ ಫಿತ್ರ್ ಹಬ್ಬದ ಸಂಭ್ರಮದಲ್ಲಿದ್ದ ಸ್ಥಳೀಯ ಯುವಕರ ತಂಡ ಜಮಾಯಿಸಿದ್ದಾರೆ. ಈ ಪೈಕಿ ಈಜುಪಟುಗಳಾದ
ಗೂಡಿನಬಳಿಯ ಶಮೀರ್ ಮುಹಮ್ಮದ್ ಮೊಮ್ಮು, ತೌಸೀಫ್ ಝಾಹಿದ್ ಜಾಯಿ, ಅಕ್ಕರಂಗಡಿಯ ಮುಕ್ತಾರ್ ಹಾಗೂ ಆರಿಫ್ ಹೈವೇ ಎಂಬವರು ಕ್ಷಣಮಾತ್ರದಲ್ಲಿ ನದಿಗೆ ಹಾರಿ ರಕ್ಷಿಸಿದ್ದಾರೆ.
ನದಿಯಲ್ಲಿ ಮುಳುಗಿದ್ದ ನಿಶಾಂತ್ನನ್ನು ಮೇಲಕ್ಕೆತ್ತಿ ದ್ದು, ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತ ಪಟ್ಟಿದ್ದಾರೆ ಎಂದು ಹೇಳಲಾಗಿದೆ. ಆತ್ಮಹತ್ಯೆಗೆ ಕಾರಣ ಇನ್ನಷ್ಟೇ ತಿಳಿದು ಬರಬೇಕಿದೆ ಎಂದು ಬಂಟ್ವಾಳ ನಗರ ಠಾಣಾಧಿಕಾರಿ ಅವಿನಾಶ್ ತಿಳಿಸಿದ್ದಾರೆ.
ಹಬ್ಬದ ಸಂಭ್ರಮದಲ್ಲೂ ಹಿಂದೂ ಯುವಕನ ರಕ್ಷಣೆಗಾಗಿ ನದಿಗೆ ಹಾರಿ, ಮೇಲಕ್ಕೆತ್ತಿ ರಕ್ಷಣೆಗಾಗಿ ಮುಸಲ್ಮಾನ ಯುವಕರು ಶ್ರಮಿಸಿದ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಪ್ರಶಂಸೆ ವ್ಯಕ್ತವಾಗಿದೆ.