ಬಂಟ್ವಾಳ: ರಾಜ್ಯದಲ್ಲಿ ಇಂದು 267 ಹೊಸ ಕೊರೋನಾ ಸೋಂಕು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 4063 ಕ್ಕೆ ಏರಿಕೆಯಾಗಿದೆ.
ಕಲಬುರಗಿ 105, ಉಡುಪಿ 62, ರಾಯಚೂರು 35, ಬೆಂಗಳೂರು 20, ಮಂಡ್ಯ 13, ಯಾದಗಿರಿ 9, ವಿಜಯಪುರ 6, ದಾವಣಗೆರೆ 3,
ಶಿವಮೊಗ್ಗ, ಮೈಸೂರು, ಬಾಗಲಕೋಟೆ, ದ.ಕ. ತಲಾ 2, ಬಳ್ಳಾರಿ, ಹಾಸನ ತಲಾ 1 ಕೇಸ್ ಪತ್ತೆಯಾಗಿರುವ ಬಗ್ಗೆ ಇಂದಿನ ಹೆಲ್ತ್ ಬುಲೆಟಿನ್ ನಲ್ಲಿ ಪತ್ತೆಯಾಗಿದೆ. ರಾಜ್ಯದಲ್ಲಿ ಇಂದು 111 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ವರದಿ ತಿಳಿಸಿದೆ.
ಕೊರೋನಾ ಸೋಂಕಿಗೆ ಇಂದು ರಾಜ್ಯದಲ್ಲಿ ದಾವಣಗೆರೆಯ 80 ವರ್ಷದ ವೃದ್ಧೆಯ ಬಲಿಯಾಗಿದ್ದು, ಸಾವಿನ ಸಂಖ್ಯೆ 53ಕ್ಕೆ ಏರಿಕೆಯಾಗಿದೆ.