Tuesday, October 24, 2023

ಕಟ್ಟಡ ಕಾರ್ಮಿಕರ ಖಾತೆಗೆ ಕೊವಿಡ್-19 ಪರಿಹಾರದ ಹಣ ಜಮಾ ಮಾಡಲಾಗಿದೆ: ರಾಜ್ಯ ಸರ್ಕಾರ ಹೈ ಕೋರ್ಟ್ ಗೆ ನೋಟೀಸ್

Must read

ಬೆಂಗಳೂರು : ಲಾಕ್‌ಡೌನ್‌ ನಿಂದಾಗಿ ಸಂಕಷ್ಟದಲ್ಲಿದ್ದ ಕಟ್ಟಡ ಕಾರ್ಮಿಕರ ಖಾತೆಗೆ ಕೊವಿಡ್-19 ಪರಿಹಾರದ ಹಣದಲ್ಲಿ ಒಟ್ಟು 619 ಕೋಟಿ ರೂ. ಜಮಾ ಮಾಡಲಾಗಿದೆ ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ತಿಳಿಸಿದೆ. ಕೊವಿಡ್-19 ಪರಿಹಾರದ ಹಣದ ಬಗ್ಗೆ ಮಾಹಿತಿ ನೀಡುವಂತೆ ವಿಧಾನ ಪರಿಷತ್ ಮಾಜಿ ಸದಸ್ಯ ರಮೇಶ್ ಬಾಬು ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದು, ಈ ಅರ್ಜಿ ವಿಚಾರಣೆ ಸಂದರ್ಭದಲ್ಲಿ ಸರ್ಕಾರಿ ವಕೀಲರು, 12.39 ಲಕ್ಷ ಕಟ್ಟಡ ಕಾರ್ಮಿಕರ ಬ್ಯಾಂಕ್ ಖಾತೆಗಳಿಗೆ ತಲಾ 5 ಸಾವಿರ ರೂ. ನಗದನ್ನು ಒಟ್ಟು 619 ಕೋಟಿ ರೂ. ಜಮಾ ಮಾಡಲಾಗಿದೆ. ಹಾಗೆಯೇ ಇದರ ನಿರ್ವಹಣೆಗಾಗಿ ರಾಜ್ಯದಾದ್ಯಂತ 41 ಜಿಲ್ಲಾ ಕಾರ್ಮಿಕ ಅಧಿಕಾರಿಗಳಿಗೆ ಜವಾಬ್ದಾರಿ ನೀಡಿಲಾಗಿದೆ ಎಂದು ಮಾಹಿತಿ ನೀಡಿದರು.
ನ್ಯಾಯಪೀಠವು ಈ ಬಗ್ಗೆ ಹೇಳಿಕೆ ಕೇಳಿ ಸರ್ಕಾರ ಹೇಳುವಂತೆ ಈವರೆಗೆ 12.39 ಲಕ್ಷ ಕಾರ್ಮಿಕರಿಗಷ್ಟೇ ಪರಿಹಾರ ತಲುಪಿದ್ದು, ಇನ್ನುಳಿದ ಕಾರ್ಮಿಕರಿಗೆ ಯಾವಾಗ ಪರಿಹಾರ ನೀಡಲಾಗುತ್ತದೆ ಮತ್ತು ಕಟ್ಟಡ ಕಾರ್ಮಿಕರನ್ನು ನೋಂದಾಯಿಸಿಕೊಳ್ಳಲು ಅನುಸರಿಸುತ್ತಿರುವ ಮಾನದಂಡಗಳು ಯಾವುದು ಎಂದು ವಿವರಣೆ ನೀಡಲು ಸೂಚನೆ ನೀಡಿದೆ.

More articles

Latest article