



ಬಂಟ್ವಾಳ ವಿಧಾನಸಭಾ ಕ್ಷೇತ್ರದ ತುಂಬೆ ಬಂಟರ ಭವನದಲ್ಲಿ ರಾಜ್ಯಾಧ್ಯಕ್ಷರಾದ ಸಂಸದ ನಳಿನ್ ಕುಮಾರ್ ಕಟೀಲ್ ರವರ ನೇತೃತ್ವದಲ್ಲಿ ಮಂಗಳೂರು ವಿಭಾಗದ ಜಿಲ್ಲಾಮಟ್ಟದ ಸಭೆ ನಡೆಸಲಾಯಿತು.
ಮಂಗಳೂರು ವಿಭಾಗದ 3 ಸಂಘಟನಾತ್ಮಕ ಜಿಲ್ಲೆಗಳಾದ ಉಡುಪಿ, ಕೊಡಗು ಮತ್ತು ಮಂಗಳೂರು ಜಿಲ್ಲೆಗಳ ಸಭೆಗಳನ್ನು ಬಂಟ್ವಾಳ ಬಂಟರ ಭವನದಲ್ಲಿ ನಡೆಸಲಾಯಿತು. ಈ ಸಭೆಯಲ್ಲಿ ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಅರುಣ್ ಕುಮಾರ್ ಜೀ,ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ , ಮೂರು ಜಿಲ್ಲೆಯ ಚುನಾಯಿತ ಶಾಸಕರುಗಳು ,ವಿಭಾಗದ ಪ್ರಮುಖರು, ಜಿಲ್ಲಾ ಅಧ್ಯಕ್ಷರುಗಳು , ಮಂಡಲ ಅಧ್ಯಕ್ಷರುಗಳು ಹಾಗೂ ಪ್ರಮುಖರುಗಳು ಭಾಗವಹಿಸಿದ್ದರು.





