ದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅನಾರೋಗ್ಯದಿಂದ ಬಳಲುತ್ತಿದ್ದು, ಕೊರೊನಾವೈರಸ್ ಪರೀಕ್ಷೆಗೆ ಒಳಗಾಗಲಿದ್ದಾರೆ ಎಂದು ತಿಳಿದು ಬಂದಿದೆ.
ಗಂಟಲು ನೋವು, ಜ್ವರ ಹಾಗೂ ಕೆಮ್ಮುವಿನಿಂದ ಬಳಲುತ್ತಿರುವುದರಿಂದ, ಆಮ್ ಆದ್ಮಿ ಪಕ್ಷದ(ಎಎಪಿ) ಮುಖ್ಯಸ್ಥ ಅರವಿಂದ್ ಕ್ರೇಜಿವಾಲ್ ಸ್ವತಃ ಐಸೋಲೇಶನ್ಗೆ ಒಳಗಾಗಿದ್ದು, ಕೋವಿಡ್-19 ಪರೀಕ್ಷೆಗೆ ಒಳಗಾಗಲಿದ್ದಾರೆ ಎಂದು ಪಕ್ಷದ ವಕ್ತಾರರು ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಭಾನುವಾರ ಸಂಜೆ ಆನ್ಲೈನ್ ಮೂಲಕ ಮಾಧ್ಯಮಗಳಿಗೆ ವಿವರಣೆ ನೀಡುವ ಸಲುವಾಗಿ ಕೊನೆ ಬಾರಿ ಕಾಣಿಸಿಕೊಂಡಿದ್ದರು. ನಂತರ ಅನಾರೋಗ್ಯ ಕಾರಣದಿಂದ ತಮ್ಮ ಎಲ್ಲಾ ಸಭೆಗಳನ್ನು ರದ್ದುಗೊಳಿಸಿದ್ದಾರೆ ಎನ್ನಲಾಗಿದೆ.
ದೆಹಲಿಯಲ್ಲಿ ಒಟ್ಟು 28,936 ಕರೋನವೈರಸ್ ಪ್ರಕರಣಗಳು ದಾಖಲಾಗಿದ್ದು, ಈವರೆಗೆ 812 ಜನರು ಸಾವನ್ನಪ್ಪಿದ್ದಾರೆ.