ಧರ್ಮಸ್ಥಳ: ರಾಜ್ಯ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹಾಗೂ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಭೇಟಿ ನೀಡಿ ಮಂಜುನಾಥ ಸ್ವಾಮಿಯ ದರ್ಶನ ಪಡೆದರು.
ಲೋಕಕ್ಕೆ ಬಂದಿರುವ ಕಂಟಕವನ್ನು ನಿವಾರಿಸಿ, ರಾಷ್ಟ್ರಕ್ಕೆ ಒಳಿತಾಗುವಂತೆ ಶ್ರೀ ಮಂಜುನಾಥ ಸ್ವಾಮಿಯ ಸನ್ನಿಧಾನದಲ್ಲಿ ಪ್ರಾರ್ಥನೆ ನಡೆಸಿದರು.
ಡಾ. ಡಿ. ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿಯಾಗಿ, ಮಂಜುನಾಥನ ಆಶೀರ್ವಾದವನ್ನು ಪಡೆದರು.