



ಬಂಟ್ವಾಳ: ಬಂಟ್ವಾಳ ತಾಲೂಕು ಆಡಳಿತ ಸೇರಿದಂತೆ ಇತರ ಎಲ್ಲಾ ಇಲಾಖೆಗಳ ಸಹಯೋಗದಲ್ಲಿ ಕೋವಿಡ್-19 ಮುನ್ನೆಚ್ಚರಿಕೆಯ ದೃಷ್ಟಿಯಿಂದ ಸರಕಾರದ ಆದೇಶದಂತೆ ಗುರುವಾರ ಮಾಸ್ಕ್ ಡೇಯನ್ನು ಆಚರಿಸಲಾಯಿತು.
ಈ ಹಿನ್ನೆಲೆಯಲ್ಲಿ ಬಿ.ಸಿ.ರೋಡು ಬ್ರಹ್ಮಶ್ರೀ ನಾರಾಯಣ ಗುರು ವೃತ್ತದಿಂದ ಮಿನಿ ವಿಧಾನಸೌಧದವರೆಗೆ ಜನಪ್ರತಿನಿಧಿಗಳು, ಅಧಿಕಾರಿಗಳನ್ನೊಳಗೊಂಡ ಜಾಥಾ ನಡೆಯಿತು.
ಬಂಟ್ವಾಳ ತಾ.ಪಂ.ಅಧ್ಯಕ್ಷ ಚಂದ್ರಹಾಸ ಕರ್ಕೇರ ಅವರು ಜಾಥಾಕ್ಕೆ ಚಾಲನೆ ನೀಡಿ, ಎಲ್ಲರೂ ಜತೆ ಸೇರಿ ಸರಕಾರದ ನಿರ್ದೇಶನಗಳಂತೆ ಕೋವಿಡ್-19 ವಿರುದ್ಧ ಹೋರಾಡೋಣ ಎಂದು ಕರೆ ನೀಡಿದರು.
ಮಾಸ್ಕ್ ಡೇ ಜಾಥಾದಲ್ಲಿ ತಾ.ಪಂ.ಉಪಾಧ್ಯಕ್ಷ ಅಬ್ಬಾಸ್ ಆಲಿ, ತಹಶೀಲ್ದಾರ್ ರಶ್ಮಿ ಎಸ್.ಆರ್., ತಾ.ಪಂ.ಇ.ಓ. ರಾಜಣ್ಣ, ಪುರಸಭಾ ಮುಖ್ಯಾಧಿಕಾರಿ ಲೀನಾ ಬ್ರಿಟ್ಟೊ, ತಾಲೂಕು ಆರೋಗ್ಯಾಧಿಕಾರಿ ಡಾ| ದೀಪಾ ಪ್ರಭು, ಉಪತಹಶೀಲ್ದಾರ್ಗಳಾದ ರಾಜೇಶ್ ನಾಯ್ಕ್, ಶ್ರೀಧರ್, ಕಂದಾಯ ನಿರೀಕ್ಷಕರಾದ ರಾಮ ಕಾಟಿಪಳ್ಳ, ನವೀನ್ಕುಮಾರ್ ಬೆಂಜನಪದವು, ದಿವಾಕರ್ ಮುಗುಳಿಯ, ಕಂದಾಯ ಇಲಾಖೆ ವಿಷಯ ನಿರ್ವಾಹಕ ವಿಷುಕುಮಾರ್, ಪ್ರಮುಖರಾದ ರಾಮಾನಾಥ ರಾಯಿ, ವೆಂಕಪ್ಪ ಪೂಜಾರಿ, ಪ್ರಣಾಮ್ಕುಮಾರ್, ಡೆಪ್ಯುಟಿ ತಹಶಿಲ್ದಾರ್ ರಾಧಾಕೃಷ್ಣ, ಬಿ.ಒ.ಜ್ಞಾನೇಶ್, ವಿಟ್ಲ ಸಿ.ಡಿ.ಪಿ.ಒ.ಸುಧಾಜೋಶಿ ಮೊದಲಾದವರಿದ್ದರು. ಜಾಥಾದ ವೇಳೆ ಮಾಸ್ಕ್ ಇಲ್ಲದೆ ಇರುವ ನಾಗರಿಕರಿಗೆ ಮಾಸ್ಕ್ ವಿತರಿಸಲಾಯಿತು.






