Thursday, April 18, 2024

ಅನಾರೋಗ್ಯದ ನಡುವೆ ಪರೀಕ್ಷೆ ಬರೆದ ವಿದ್ಯಾರ್ಥಿನಿ

ಬಂಟ್ವಾಳ: ಪರೀಕ್ಷಾ ಕೇಂದ್ರದಲ್ಲಿಯೇ ವಾಂತಿ ಸಮಸ್ಯೆಗೊಳಗಾಗಿದ್ದ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿನಿಯನ್ನು ವೈದ್ಯರ ತಂಡ ಪರೀಕ್ಷೆ ನಡೆಸಿದ ಬಳಿಕ ಯಾವುದೇ ಸಮಸ್ಯೆ ಇಲ್ಲದೆ ಪರೀಕ್ಷೆ ಬರೆದಿದ್ದಾಳೆ ಎಂದು ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಜ್ಞಾನೇಶ್ ಮಾಹಿತಿ ನೀಡಿದ್ದಾರೆ.

ಕೋವಿಡ್ -19 ಹಿನ್ನೆಲೆಯಲ್ಲಿ ಸಕಲ ಸುರಕ್ಷಾ ವ್ಯವಸ್ಥೆಯಡಿಯಲ್ಲಿ ಈ ಬಾರಿಯ ಹತ್ತನೇ ತರಗತಿ ಪರೀಕ್ಷೆ ನಡೆಯುತ್ತಿದ್ದು, ಇಂದು ಬೆಳಿಗ್ಗೆ ಪರೀಕ್ಷೆ ಆರಂಭವಾದ ಬಳಿಕ ಕೆಲ ಹೊತ್ತಿನಲ್ಲಿ ಬಿಸಿರೋಡು ಕಾರ್ಮೆಲ್ ಕಾನ್ವೆಂಟ್ ಶಾಲೆಯಲ್ಲಿ ವಿದ್ಯಾರ್ಥಿನಿಗೆ ವಾಂತಿಯಾಗಿತ್ತು. ಕೂಡಲೇ ಬಂಟ್ವಾಳ ವೈದ್ಯರ ತಂಡ ಆಗಮಿಸಿ,  ಪರೀಕ್ಷೆ ನಡೆಸಿದರು.
ವೈದ್ಯಕೀಯ ಪರೀಕ್ಷೆ ಸಂದರ್ಭ ಯಾವುದೇ ಸಮಸ್ಯೆ ಕಾಣಿಸಿಲ್ಲ. ಹೀಗಾಗಿ ವೈದ್ಯರ ಭರವಸೆಯಂತೆ ವಿದ್ಯಾರ್ಥಿನಿ ಪರೀಕ್ಷೆ ಬರೆದಿದ್ದಾಳೆ ಎಂದು ಕ್ಷೇತ್ರಶಿಕ್ಷಣಾಧಿಕಾರಿ ಜ್ಞಾನೇಶ್ ಎಂ.ಪಿ. ತಿಳಿಸಿದ್ದಾರೆ.

More from the blog

ನರಿಕೊಂಬು: ನವಜೀವನ ವ್ಯಾಯಾಮ ಶಾಲೆ: 21ರಂದು ಹನುಮಾನ್ ಮಂದಿರ ಲೋಕಾರ್ಪಣೆ

ಬಂಟ್ವಾಳ: ಇಲ್ಲಿನ ನರಿಕೊಂಬು ಗ್ರಾಮದ ನವಜೀವನ ವ್ಯಾಯಾಮ ಶಾಲೆ ವತಿಯಿಂದ ರೂ 1 ಕೋಟಿ ವೆಚ್ಚದಲ್ಲಿ ಪುನರ್ ನಿಮರ್ಾಣಗೊಂಡ ಶ್ರೀ ಹನುಮಾನ್ ಮಂದಿರ ಲೋಕಾರ್ಪಣೆ ಮತ್ತು ಶ್ರೀ ಆಂಜನೇಯ ಬಿಂಬ ಪುನರ್ ಪ್ರತಿಷ್ಠೆ...

ಹಿಂದೂ ಸಂಘಟನೆ ಮುಖಂಡನಿಗೆ ಚೂರಿ ಇರಿದ ಪ್ರಕರಣ : ಆರೋಪಿ ಅರೆಸ್ಟ್

ಬಂಟ್ವಾಳ: ಹಿಂದೂ ಸಂಘಟನೆಯ ಮುಖಂಡನೋರ್ವನಿಗೆ ಚೂರಿ ಇರಿದು ಪರಾರಿಯಾಗಿದ್ದ ಆರೋಪಿಯನ್ನು ಬಂಟ್ವಾಳ ನಗರ ಠಾಣೆಯ ಪೋಲೀಸರು ಬಂಧಿಸಿದ ಘಟನೆ ಇಂದು ನಡೆದಿದೆ. ಬಂಟ್ವಾಳ ನಿವಾಸಿ ರವಿ ಯಾನೆ ರವೀಂದ್ರ ಬಂಧಿತ ಆರೋಪಿಯಾಗಿದ್ದಾನೆ. ಎ.14 ರಂದು ಆದಿತ್ಯವಾರ...

ಬಂಟ್ವಾಳ: ಕರ್ಪೆ ಗ್ರಾಮದ ಮನೆಗಳಿಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

ಲೋಕಸಭಾ ಚುನಾವಣೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರನ್ನು ಬಹುಮತದಿಂದ ಗೆಲ್ಲಿಸಿಕೊಡುವಂತೆ "ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಹಾಗೂ ಜಿ.ಪಂ.ಮಾಜಿ ಸದಸ್ಯ ಎಂ.ತುಂಗಪ್ಪ ಬಂಗೇರ ಅವರು ಗ್ರಾಮ,ಮನೆ,ಮನ ಸಂಪರ್ಕ ಅಭಿಯಾನ" ಕಾರ್ಯಕ್ರಮದ ಮೂಲಕ ಬಂಟ್ವಾಳದ...

ವೈದ್ಯರ ಎಡವಟ್ಟು : ಕುಡಿದ ಮತ್ತಿನಲ್ಲಿ ರೈಲ್ವೆ ಗೇಟ್ ಗೆ ಡಿಕ್ಕಿ

ಮಂಗಳೂರಿನ ಹೆಸರಾಂತ ಮನೋರೋಗ ತಜ್ಞರೊಬ್ಬರು ಕುಡಿದ ಮತ್ತಿನಲ್ಲಿ ರೈಲ್ವೆ ಗೇಟ್ ಗೆ ಡಿಕ್ಕಿ ಹೊಡೆದು ಆವಾಂತರ ಸೃಷ್ಟಿಸಿದ ಘಟನೆ ನಗರ ಹೊರ ವಲಯದ ಪರಂಗಿಪೇಟೆ ಬಳಿಯ ಅರ್ಕುಳ ಎಂಬಲ್ಲಿ ನಿನ್ನೆ ರಾತ್ರಿ ಸಂಭವಿಸಿದೆ. ಕುಡಿದ...