ಬಂಟ್ವಾಳ: ಪರೀಕ್ಷಾ ಕೇಂದ್ರದಲ್ಲಿಯೇ ವಾಂತಿ ಸಮಸ್ಯೆಗೊಳಗಾಗಿದ್ದ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿನಿಯನ್ನು ವೈದ್ಯರ ತಂಡ ಪರೀಕ್ಷೆ ನಡೆಸಿದ ಬಳಿಕ ಯಾವುದೇ ಸಮಸ್ಯೆ ಇಲ್ಲದೆ ಪರೀಕ್ಷೆ ಬರೆದಿದ್ದಾಳೆ ಎಂದು ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಜ್ಞಾನೇಶ್ ಮಾಹಿತಿ ನೀಡಿದ್ದಾರೆ.
ಕೋವಿಡ್ -19 ಹಿನ್ನೆಲೆಯಲ್ಲಿ ಸಕಲ ಸುರಕ್ಷಾ ವ್ಯವಸ್ಥೆಯಡಿಯಲ್ಲಿ ಈ ಬಾರಿಯ ಹತ್ತನೇ ತರಗತಿ ಪರೀಕ್ಷೆ ನಡೆಯುತ್ತಿದ್ದು, ಇಂದು ಬೆಳಿಗ್ಗೆ ಪರೀಕ್ಷೆ ಆರಂಭವಾದ ಬಳಿಕ ಕೆಲ ಹೊತ್ತಿನಲ್ಲಿ ಬಿಸಿರೋಡು ಕಾರ್ಮೆಲ್ ಕಾನ್ವೆಂಟ್ ಶಾಲೆಯಲ್ಲಿ ವಿದ್ಯಾರ್ಥಿನಿಗೆ ವಾಂತಿಯಾಗಿತ್ತು. ಕೂಡಲೇ ಬಂಟ್ವಾಳ ವೈದ್ಯರ ತಂಡ ಆಗಮಿಸಿ, ಪರೀಕ್ಷೆ ನಡೆಸಿದರು.
ವೈದ್ಯಕೀಯ ಪರೀಕ್ಷೆ ಸಂದರ್ಭ ಯಾವುದೇ ಸಮಸ್ಯೆ ಕಾಣಿಸಿಲ್ಲ. ಹೀಗಾಗಿ ವೈದ್ಯರ ಭರವಸೆಯಂತೆ ವಿದ್ಯಾರ್ಥಿನಿ ಪರೀಕ್ಷೆ ಬರೆದಿದ್ದಾಳೆ ಎಂದು ಕ್ಷೇತ್ರಶಿಕ್ಷಣಾಧಿಕಾರಿ ಜ್ಞಾನೇಶ್ ಎಂ.ಪಿ. ತಿಳಿಸಿದ್ದಾರೆ.