


ಮಂಗಳೂರು: ಕೊರೊನಾ ಹಿನ್ನಲೆ ಬೆಂಗ್ರೆ ಪ್ರದೇಶದಿಂದ ಬೋಟ್ಗಳನ್ನು ಬಂದ್ ಮಾಡಲಾಗಿದ್ದು, ಎಸ್ಎಸ್ಎಲ್ಸಿ ವಿದ್ಯಾರ್ಥಿಗಳು ರಸ್ತೆ ಮಾರ್ಗವಾಗಿ ಸುತ್ತು ಬಳಸಿ ಬರಬೇಕಾಗುತ್ತದೆ. ಅದರಿಂದಾಗಿ ವಿದ್ಯಾರ್ಥಿಗಳಿಗೆ ತೊಂದರೆ ಉಂಟಾಗುವುದರಿಂದ ವಿದ್ಯಾರ್ಥಿಗಳಿಗಾಗಿ ಬೋಟ್ ಪ್ರಯಾಣ ಆರಂಭಿಸಲಾಗಿದ್ದು, ಎಸ್ಎಸ್ಎಲ್ಸಿ ಪರೀಕ್ಷೆಯನ್ನು ಎದುರಿಸಲು ದ್ವೀಪ ಪ್ರದೇಶವಾಗಿರುವ ತೋಟಬೆಂಗ್ರೆಯ 15 ಕ್ಕೂ ಅಧಿಕ ವಿದ್ಯಾರ್ಥಿಗಳು ಬೋಟ್ನಲ್ಲಿ ಪ್ರಯಾಣ ಮಾಡಿ ನಗರಕ್ಕೆ ಆಗಮಸಿದ್ದಾರೆ. ಎಸ್ಎಸ್ಎಲ್ಸಿ ಪರೀಕ್ಷೆಯು ಜೂ. 25 ಕ್ಕೆ ಪ್ರಾರಂಭವಾಗಿದ್ದು, ತೋಟಬೆಂಗ್ರೆ ವಿದ್ಯಾರ್ಥಿಗಳು ರಸ್ತೆ ಮಾರ್ಗವಾಗಿ ಸಂಚರಿಸಿ ಪರೀಕ್ಷಾ ಕೇಂದ್ರಕ್ಕೆ ನಿಗದಿತ ಸಮಯಕ್ಕೆ ತಲುಪಲು ಕಷ್ಟವಾಗುವುದರಿಂದ ಟ್ರಾಲ್ ಬೋಟ್ನಲ್ಲಿ ವಿದ್ಯಾರ್ಥಿಗಳು ತೋಟಬೆಂಗ್ರೆಯಿಂದ ಬಂದರಿಗೆ ಬೋಟ್ ಪ್ರಯಾಣ ಮಾಡಿದ್ದು, ಬೋಟ್ ಪ್ರಯಾಣದ ಬಳಿಕ ಆಟೋ ರಿಕ್ಷಾ ಮೂಲಕ ಪರೀಕ್ಷಾ ಕೇಂದ್ರಗಳಿಗೆ ತಲುಪುತ್ತಾರೆ.





