ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಂಟ್ವಾಳ ತಾಲೂಕು, ಪಾಣೆಮಂಗಳೂರು ವಲಯ ಪ್ರಗತಿ ಬಂಧು ಸ್ವ ಸಹಾಯ ಸಂಘ ಅಮ್ಟೂರು ಇದರ ಸಹಯೋಗದೊಂದಿಗೆ ಪರಿಸರ ಜಾಗೃತಿ ಮಾಹಿತಿ ಮತ್ತು ಗಿಡ ನಾಟಿ ಕಾರ್ಯಕ್ರಮ ಅಮ್ಟೂರು ಶ್ರೀಕೃಷ್ಣ ಮಂದಿರದಲ್ಲಿ ಒಕ್ಕೂಟದ ಅಧ್ಯಕ್ಷೆ ಚಿತ್ರವತಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಪ್ರಗತಿ ಬಂಧು ಒಕ್ಕೂಟದ ಮಾಜಿ ಅಧ್ಯಕ್ಷ ಜಯಂತ ಕಟ್ಟೆಮಾರ್ ಅವರು ಮಂದಿರದ ಮುಂಭಾಗದಲ್ಲಿ ಸಂಪಿಗೆಯ ಗಿಡ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕೊರೋನಾದ ಜಾಗೃತಿ ಮತ್ತು ಪರಿಸರ ಸಂರಕ್ಷಣೆಯ ಬಗ್ಗೆ ಮಾಹಿತಿ ನೀಡಿ, ಎಲ್ಲರಿಗೂ ಗಿಡಗಳನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ಕೃಷಿ ಮೇಲ್ವಿಚಾಲಕ ಜನಾರ್ದನ, ವಲಯದ ಮೇಲ್ವಿಚಾಲಕಿ ಅಮಿತಾ, ವಿಭಾಗದ ಸೇವಾಪ್ರತಿನಿಧಿ ವನಿತಾ, ಶ್ರೀಕೃಷ್ಣ ಮಂದಿರದ ಲೆಕ್ಕಪರಿಶೋಧಕ ಕುಶಾಲಪ್ಪ ಅಮ್ಟೂರು, ಒಕ್ಕೂಟದ ಪದಾಧಿಕಾರಿಗಳು, ಸದಸ್ಯ ಪ್ರವೀಣ್ ಹಾಗೂ ಸ್ವಸಹಾಯ ಸಂಘದ
ಸದಸ್ಯರುಗಳು ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಶ್ರೀದೇವಿ ಸಂಘದ ಬಬಿತಾ ಸ್ವಾಗತಿಸಿ, ವಸಂತ ಪೂವಳ ನಿರೂಪಿಸಿ, ವಂದಿಸಿದರು.