Sunday, April 7, 2024

ಪತಂಜಲಿಯ ಕೊರೋನಿಲ್ ಮಾರಾಟಕ್ಕೆ ಅನುಮತಿ ನೀಡಿದ ಕೇಂದ್ರ

ಬೆಂಗಳೂರು: ಪತಂಜಲಿ ಸಂಸ್ಥೆಯ ಕೊರೋನಿಲ್‌ನ ಮಾರಾಟಕ್ಕೆ ಕೇಂದ್ರ ಆಯುಷ್ ಸಚಿವಾಲಯ ಅನುಮತಿ ನೀಡಿದ್ದು, ಇದು ಕೊರೊನಾದ ವಿರುದ್ಧದ ಔಷಧಿಯಾಗಿ ಅಲ್ಲ ರೋಗನಿರೋಧಕ ಉತ್ತೇಜಕವನ್ನಾಗಿ ಮಾತ್ರ ಮಾರಾಟ ಮಾಡಲು ಅವಕಾಶ ಎಂದು ತಿಳಿಸಿದೆ.

ಈ ಹಿಂದೆ ಕೊರೋನಿಲ್‌ನ್ನು ಕೋವಿಡ್‌ಗೆ ಔಷಧ ಎಂದು ಕೆಲ ದಿನಗಳ ಹಿಂದೆ ಪತಂಜಲಿ ಸಂಸ್ಥೆ ಬಿಡುಗಡೆ ಮಾಡಿದ್ದು, ಇದನ್ನು ಕೊರೊನಾ ಗುಣಪಡಿಸಲು ಬಳಸಲಾಗುವ ಔಷಧ ಎಂದು ತಾವು ಪ್ರಮಾಣೀಕರಿಸುವವರೆಗೂ ಮಾರಾಟ ಮಾಡುವಂತಿಲ್ಲ ಎಂದು ಆಯುಷ್ ಸಚಿವಾಲಯ ತಿಳಿಸಿತ್ತು.

ಬಳಿಕ ಯೂಟರ್ನ್ ಹೊಡೆದ ಪತಂಜಲಿ ಸಂಸ್ಥೆ ಕೋವಿಡ್ -19 ಗೆ ಔಷಧಿ ತಯಾರಿಸಿದಾಗಿ ನಾವು ಎಲ್ಲೂ ಹೇಳಿಕೊಂಡಿಲ್ಲ. ಇದು ರೋಗ ನಿರೋಧಕ ಉತ್ತೇಜಕ ಔಷಧ. ನಮ್ಮ ವಿರುದ್ಧ ಪಿತೂರಿ ನಡೆಸಲಾಗಿದೆ ಎಂದು ಹೇಳಿದೆ. ಇದೀಗ ಕೇಂದ್ರ ಆಯುಷ್ ಸಚಿವಾಲಯ ಕೊರೋನಿಲ್‌ನ್ನು ರೋಗ ನಿರೋಧಕ ಉತ್ತೇಜಕವನ್ನಾಗಿ ಮಾತ್ರ ಮಾರಾಟ ಮಾಡಲು ಅವಕಾಶ ನೀಡಿದೆ.

More from the blog

ಬಂಟ್ವಾಳ: ನಿಯಮ ಮೀರಿ ಚಾಲನೆ ಮಾಡಿ ಪೋಲೀಸರ ಕೈಗೆ ಸಿಕ್ಕಿಬಿದ್ದರೆ ದಂಡ ಗ್ಯಾರಂಟಿ….

ಬಂಟ್ವಾಳ: ರಸ್ತೆಯಲ್ಲಿ ಟ್ರಾಫಿಕ್ ಪೋಲೀಸರು ದಂಡ ವಸೂಲಿ ಮಾಡುವ ವೇಳೆ ಸುಳ್ಳು ಹೇಳಿಬಚಾವಾಗಲು ಸಾಧ್ಯವಿಲ್ಲ, ಜೊತೆಗೆ ಅಸಭ್ಯ ವರ್ತನೆ ಮಾಡಿದರೆ ಜೋಕೆ, ಅವರ ಶರೀರದಲ್ಲಿ ಕಣ್ಗಾವಲು ಕ್ಯಾಮರಾ ಅಳವಡಿಸಿಲಾಗಿದ್ದು, ಸೂಕ್ಷ್ಮವಾಗಿ ಎಲ್ಲವನ್ನು ಸೆರೆ...

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ : ಚೆಂಡಿನ ಗದ್ದೆಯಲ್ಲಿ ಪ್ರಥಮ ಚೆಂಡು

ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ದೇವಳದ ಚೆಂಡಿನ ಗದ್ದೆಯಲ್ಲಿ ಇಂದು ಪ್ರಥಮ ಚೆಂಡು ನಡೆಯಿತು. ‌ ಇವತ್ತಿನಿಂದ ಮುಂದಿನ ಐದು ದಿನಗಳ ಕಾಲ ಇಲ್ಲಿ ಚೆಂಡು...

ಏಪ್ರಿಲ್ 7ರಂದು ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ

ಬಂಟ್ವಾಳ: ಏಪ್ರಿಲ್ 7ರಂದು ಅಪರಾಹ್ನ 3 ಗಂಟೆಗೆ ಬಿ.ಸಿ.ರೋಡು ರಂಗೋಲಿ ಸಭಾಂಗಣದಲ್ಲಿ ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ ನಡೆಯಲಿದೆ ಎಂದು ತಾಲೂಕು ಘಟಕದ...

ದ್ವಿಚಕ್ರ ವಾಹನಕ್ಕೆ ರಿಕ್ಷಾ ಡಿಕ್ಕಿ : ಸಹಸವಾರ ಸ್ಥಳದಲ್ಲೇ ಮೃತ್ಯು

ಬಂಟ್ವಾಳ: ರಿಕ್ಷಾ ಡಿಕ್ಕಿಯಾಗಿ ದ್ವಿಚಕ್ರ ವಾಹನದಲ್ಲಿ ಸಂಚಾರ ಮಾಡುತ್ತಿದ್ದ ಸಹಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನರಿಕೊಂಬು ಎಂಬಲ್ಲಿ ನಡೆದಿದೆ. ನರಿಕೊಂಬು ನಿವಾಸಿ ನೀಲಪ್ಪ ಪೂಜಾರಿ ಅವರ ಮಗ ಪವನ್ ( 17) ಮೃತಪಟ್ಟ ಬಾಲಕ. ಮನೆಯಿಂದ...