ಬಂಟ್ವಾಳ: ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ವೇದಿಕೆಯ ನೇತೃತ್ವದಲ್ಲಿ ಇಂದು ರಾಷ್ಟ್ರವ್ಯಾಪ್ತಿ ಪ್ರತಿಭಟನೆಗೆ ಕರೆ ನೀಡಿರುವ ಹಿನ್ನೆಲೆ ಜೆಸಿಟಿಯು ಬಂಟ್ವಾಳ ತಾಲೂಕು ಸಮಿತಿ ನೇತೃತ್ವದಲ್ಲಿ ಹಕ್ಕೊತ್ತಾಯ ಪ್ರದರ್ಶನ ಬಿಸಿರೋಡು ವಿಧಾನ ಸೌಧದ ಎದುರು ಜರುಗಿತು.
ಎಐಟಿಯುಸಿ ಜಿಲ್ಲಾ ಉಪಾಧ್ಯಕ್ಷ ಬಿ.ಶೇಖರ್, ಸಿಐಟಿಯು ಜಿಲ್ಲಾ ಕಾರ್ಯದರ್ಶಿ ರಾಮಣ್ಣ ವಿಟ್ಲ ಸಭೆಯನ್ನುದ್ದೇಶಿಸಿ ಮಾತಾಡಿದರು. ಸಮಾನ ಮನಸ್ಕ ಸಂಘಟನೆಗಳ ಸಮನ್ವಯ ಸಮಿತಿ ಅಧ್ಯಕ್ಷ ಪ್ರಭಾಕರ ದೈವಗುಡ್ಡೆ ಉಪಸ್ಥಿತರಿದ್ದರು. ನೇತೃತ್ವವನ್ನುಎಐಟಿಯುಸಿ ತಾಲೂಕು ಮುಖಂಡರಾದ ಬಿ.ಬಾಬು ಭಂಡಾರಿ, ಸರಸ್ವತಿ ಕಡೇಶ್ವಾಲ್ಯ, ಶಮಿತಾ, ಹರ್ಷಿತ್, ಸರೋಜಿನಿ ಕುರಿಯಾಳ ಹಾಗೂ ಸಿಐಟಿಯು ತಾಲೂಕು ಮುಖಂಡರುಗಳಾದ ಲೋಲಾಕ್ಷಿ, ಟೂರಿಸ್ಟ್ ವಾಹಕ ಚಾಲಕರ ಸಂಘಟನೆ(ಸಿಐಟಿಯು) ಕಾರ್ಯದರ್ಶಿ ಗುಣಕರ್, ಭಾರತೀಯ ಮಹಿಳಾ ಒಕ್ಕೂಟ(ಎನ್ ಎಫ್ ಐ ಡಬ್ಯೂ) ಅಧ್ಯಕ್ಷೆ ಭಾರತಿ ಪ್ರಶಾಂತ್, ಯುವ ವಕೀಲ ತುಳಸೀದಾಸ್ ವಿಟ್ಲ, ಡಿವೈಎಫ್ ಐ ಜಿಲ್ಲಾ ಮುಖಂಡ ಮೊಹಮ್ಮದ್ ಇಕ್ಬಾಲ್ ಮುಂತಾದವರು ವಹಿಸಿದ್ದರು.
ಪ್ರಧಾನ ಮಂತ್ರಿಗೆ ಬಂಟ್ವಾಳ ತಹಶ್ಹೀಲ್ದಾರರ ಮುಖಾಂತರ ಸುಮಾರು 15 ಪ್ರಮುಖ ವಿವಿಧ ಬೇಡಿಕೆಗಳನ್ನೊಳಗೊಂಡ ಮನವಿಯನ್ನು ಸಲ್ಲಿಸಲಾಯಿತು. ಎಐಟಿಯುಸಿ ಜಿಲ್ಲಾ ಸಹಕಾರ್ಯದರ್ಶಿ ಸುರೇಶ್ ಕುಮಾರ್ ಬಂಟ್ವಾಳ್ ಪ್ರಾಸ್ತಾವಿಕವಾಗಿ ಸ್ವಾಗತಿಸಿ, ವಂದಿಸಿದರು.