Tuesday, October 17, 2023

ಆಗಸ್ಟ್‌‌ 5: ರಾಮಮಂದಿರ ನಿರ್ಮಾಣಕ್ಕೆ ಭೂಮಿ ಪೂಜೆ

Must read

ಅಯೋಧ್ಯೆ: ಅಯೋಧ್ಯೆಯಲ್ಲಿ ನಿರ್ಮಾಣವಾಗಲಿರುವ ರಾಮ ಮಂದಿರ ನಿರ್ಮಾಣಕ್ಕೆ ಪೂಜೆ ನೆರವೇರಿಸುವ ಬಗ್ಗೆ ನಿನ್ನೆ ಮಧ್ಯಾಹ್ನ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌‌‌ ನ ಸಭೆ ನಡೆಯಿತು.
ನಿನ್ನೆ ನಡೆದ ಸಭೆಯಲ್ಲಿ ಆಗಸ್ಟ್‌‌ 5ರಂದು ರಾಮಮಂದಿರ ನಿರ್ಮಾಣಕ್ಕೆ ಪೂಜೆ ನಡೆಸುವ ಬಗ್ಗೆ ತೀರ್ಮಾನ ಮಾಡಿರುವುದಾಗಿ ಮೂಲಗಳಿಂದ ಮಾಹಿತಿ ದೊರಕಿದೆ.
ಈ ಪೂಜಾ ಕಾರ್ಯಕ್ರಮಕ್ಕೆ ಪ್ರಧಾನಿ ಮೋದಿ ಅವರನ್ನು ಆಹ್ವಾನ ಮಾಡಲು ಟ್ರಸ್ಟ್‌ ತೀರ್ಮಾನ ಮಾಡಿದ್ದು, ಅದರಂತೆ ಪೂಜೆಯಲ್ಲಿ ಪ್ರಧಾನಿ ಮೋದಿ ಅವರು ಭಾಗವಹಿಸಲಿದ್ದಾರೆ ಎಂಬ ಮಾಹಿತಿ ಇದೆ.
ಇಂದು ನಡೆದ ಸಭೆಯಲ್ಲಿ 15 ಟ್ರಸ್ಟೀಗಳಲ್ಲಿ 12 ಮಂದಿ ಮಾತ್ರ ಪಾಲ್ಗೊಂಡಿದ್ದರು. ಉಳಿದ ಮೂರು ಟ್ರಸ್ಟೀಗಳು ಆನ್‌ಲೈನ್‌‌ ಮೂಲಕ ಸಭೆಯಲ್ಲಿ ಭಾಗವಹಿಸಿದ್ದು, ಈ ಪೈಕಿ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟಿಗಳಲ್ಲಿ ಒಬ್ಬರಾದ ಉಡುಪಿಯ ಪೇಜಾವರ ಶ್ರೀ ವಿಶ್ವಪ್ರಸನ್ನ ಶ್ರೀಪಾದರು ಕೂಡಾ ಭಾಗವಹಿಸಿದ್ದರು ಎಂದು ವರದಿಯಾಗಿದೆ.

More articles

Latest article