ಬೆಳ್ತಂಗಡಿ: ತಾಲೂಕಿನ ದಿಡುಪೆ ಕುಕ್ಕಾವು ಎಂಬಲ್ಲಿ ಬಂಗಾಡಿ- ಕಿಲ್ಲೂರು ಕಡೆಯಿಂದ ಸೋಮಂತಡ್ಕಕ್ಕೆ ಆಪೆ ರಿಕ್ಷಾದಲ್ಲಿ ಗೋ ಮಾಂಸ ಸಾಗಿಸುತ್ತಿದ್ದ ವೇಳೆ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ.
ವಿಶ್ವ ಹಿಂದೂ ಪರಿಷತ್ ಬೆಳ್ತಂಗಡಿ ಪ್ರಖಂಡದ ಕಾರ್ಯಕರ್ತರು ಗೋ ಮಾಂಸ ಸಾಗಿಸುತ್ತಿದ್ದ ರಿಕ್ಷಾ ವನ್ನು ತಡೆದು ನಿಲ್ಲಿಸಿ, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಸ್ಥಳಕ್ಕೆ ಬಂದ ಪೊಲೀಸರು ಗೋ ಮಾಂಸ ಸಾಗಿಸುತ್ತಿದ್ದ ರಿಕ್ಷಾ ಹಾಗೂ ಚಾಲಕ ನನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.