



ಸುಬ್ರಹ್ಮಣ್ಯ: ಪಶ್ಚಿಮಘಟ್ಟ ಪ್ರದೇಶ ಹಾಗೂ ಕರಾವಳಿ ಪ್ರದೇಶದಲ್ಲಿ ಅಧಿಕ ಮಳೆಯಾಗುತ್ತಿರುವುದರಿಂದ ಕುಮಾರಧಾರಾ ನದಿ ತುಂಬಿ ಹರಿಯುತ್ತಿದೆ. ಸುಬ್ರಹ್ಮಣ್ಯ ಪರಿಸರದಲ್ಲಿಯೂ ಬೆಳಿಗ್ಗೆಯಿಂದ ನಿರಂತರ ಮಳೆಯಾಗುತ್ತಿದ್ದು, ಕುಕ್ಕೆ ಸುಬ್ರಹ್ಮಣ್ಯ ಸ್ನಾನಘಟ್ಟ ಸಂಪೂರ್ಣ ಮುಳುಗಡೆಯಾದ ಬಗ್ಗೆ ವರದಿಯಾಗಿದೆ.
ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸಂಪರ್ಕ ಕಲ್ಪಿಸುವ ಕುಮಾರಧಾರಾ ನದಿಯ ಹೊಸಮಠ ಹಾಗೂ ನೇತ್ರಾವತಿ ನದಿಯಲ್ಲೂ ನೀರಿನ ಮಟ್ಟ ಬಹಳವಾಗಿ ಏರಿಕೆಯಾಗಿ ಹರಿಯುತ್ತಿದೆ. ಹೀಗೆಯೇ ಮಳೆ ಮುಂದುವರೆದದ್ದೇ ಆದರೆ ಕೆಳಮಟ್ಟದ ಹಲವಾರು ಸೇತುವೆಗಳು ಮುಳುಗಡೆ ಹೊಂದಿ ರಸ್ತೆ ಸಂಪರ್ಕ ಕಡಿತಗೊಳ್ಳುವ ಸಾಧ್ಯತೆ ಇದೆ. ಈಗಾಗಲೇ ನದಿ ತೀರದ ಬಹುತೇಕ ಎಲ್ಲಾ ಕೃಷಿ ಭೂಮಿಗಳಿಗೂ ನೀರು ನುಗ್ಗಿರುವ ಬಗ್ಗೆ ಮಾಹಿತಿ ಇದೆ.





