


ಬಂಟ್ವಾಳ: ತಾಲೂಕಿನ ಅಮ್ಮುಂಜೆ ಗ್ರಾಮದ ಕಲಾಯಿ ಎಂಬಲ್ಲಿ ಅಲ್ಪಸಂಖ್ಯಾತ ಇಲಾಖೆಯ ಹಾಸ್ಟೆಲ್ ಕಟ್ಟಡ ಕಾಮಗಾರಿ ನಡೆಯುತ್ತಿದ್ದು, ಸ್ಥಳೀಯ ನಿವಾಸಿ ಶಂಕರ ಶೆಟ್ಟಿಯವರ ದೂರಿನನ್ವಯ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ರವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಕಟ್ಟಡ ನಿರ್ಮಾಣಕ್ಕಾಗಿ ರಸ್ತೆ ಬದಿ ಗುಡ್ಡ ಅಗೆಯಲಾಗಿದ್ದು, ನಿರ್ಮಾಣದ ಜಾಗದ ಹಿಂಭಾಗ ಕುಸಿಯುವ ಭೀತಿಯಲ್ಲಿದ್ದು, ಲೋಕೋಪಯೋಗಿ ಇಲಾಖೆಯವರು ಈ ಹಿಂದೆ ಸ್ಥಳ ಪರಿಶೀಲಿಸಿ ಕಾಮಗಾರಿ ಸ್ಥಗಿತಗೊಳಿಸುವಂತೆ ಸೂಚಿಸಿರುತ್ತಾರೆ.
ಈ ದಿನ ಸಂಬಂಧಿಸಿದ ಇಲಾಖಾಧಿಕಾರಿಗಳಿಗೆ ಸೂಕ್ತ ಮುನ್ನೆಚ್ಚರಿಕೆ ಕ್ರಮಕೈಗೊಳ್ಳುವವರೆಗೆ ಕಾಮಗಾರಿ ನಡೆಸದಂತೆ ಶಾಸಕರು ಗುತ್ತಿಗೆದಾರರಿಗೆ ಹಾಗೂ ಇಂಜಿನೀಯರ್ ಗಳಿಗೆ ಸೂಚಿಸಿರುತ್ತಾರೆ. ಈ ಸಂದರ್ಭದಲ್ಲಿ ದೂರುದಾರ ಶಂಕರ ಶೆಟ್ಟಿ, ಸ್ಥಳಿಯರಾದ ಜನಾರ್ಧನ ಬಾರಿಂಜೆ, ಕಾರ್ತಿಕ್ ಬಳ್ಳಾಲ್, ಪುನಿತ್ ಶೆಟ್ಟಿ, ಇಲ್ಯಾಸ್, ಕೆ.ಆರ್.ಡಿ.ಎಲ್ ಇಂಜಿನಿಯರ್ ರಕ್ಷಿತ್, ಗುತ್ತಿಗೆದಾರರು ಉಪಸ್ಥಿತರಿದ್ದರು.






