ಬಂಟ್ವಾಳ : ಬಂಟ್ವಾಳ ತಾಲೂಕು ಮಾನವ ಬಂಧುತ್ವ ವೇದಿಕೆಯ ಅಧ್ಯಕ್ಷರಾಗಿ ಆಯ್ಕೆಯಾದ ರಾಜಾ ಚೆಂಡ್ತಿಮಾರ್ ರವರನ್ನು ಡಿ.ವೈಎಫ್.ಐ ಬಂಟ್ವಾಳ ತಾಲೂಕು ಸಮಿತಿ ವತಿಯಿಂದ ಬಿ.ಸಿ.ರೋಡ್ ಕಚೇರಿ ಯಲ್ಲಿ ಸನ್ಮಾನಿಸಲಾಯಿತು.
ಸನ್ಮಾನ ಕಾರ್ಯಕ್ರಮವನ್ನುದ್ದೇಶಿಸಿ ಸಾಮಾಜಿಕ ಕಾರ್ಯಕರ್ತ ಪ್ರಭಾಕರ ದೈವಗುಡ್ಡೆ ಮಾತನಾಡಿ, ರಾಜಾ ಚೆಂಡ್ತಿಮಾರ್ ರವರು ಹಲವಾರು ಸಮಾಜಮುಖಿ ಕೆಲಸಗಳನ್ನು ಮಾಡುತ್ತಾ ಜನರ ಪ್ರೀತಿಯನ್ನು ಗಳಿಸಿದ್ದು, ಬಡವರು,ನಿರ್ಗತಿಕರಿಗೆ ನಿರಂತರವಾಗಿ ಸಹಾಯ ಮಾಡುತ್ತಿದ್ದು, ಲಾಕ್ ಡೌನ್ ಸಂಧರ್ಭದಲ್ಲಿ ಕೂಡಾ ಹಲವಾರು ವಲಸೆ ಕಾರ್ಮಿಕರಿಗೆ ಸಹಾಯ ಮಾಡಿ ಅವರನ್ನು ಊರಿಗೆ ತಲುಪಿಸುವ ಕೆಲಸ ಮಾಡಿರುತ್ತಾರೆ. ಇವರು ಮಾನವ ಬಂಧುತ್ವ ವೇದಿಕೆಯ ಬಂಟ್ವಾಳ ತಾಲೂಕು ಅಧ್ಯಕ್ಷರಾಗಿ ಆಯ್ಕಯಾಗಿರುವುದು ಸಂತಸದ ವಿಷಯವಾಗಿದ್ದು, ಇವರ ನಾಯಕತ್ವದಲ್ಲಿ ಸಂಘಟನೆಯು ಬಲಿಷ್ಟವಾಗಿ ರೂಪುಗೊಳ್ಳಲಿ ಎಂದು ಹಾರೈಸಿದರು.
ಕಾರ್ಯಕ್ರಮದಲ್ಲಿ ಬಂಟ್ವಾಳ ತಾಲೂಕು ಡಿ.ವೈ.ಎಫ್.ಐ. ಅಧ್ಯಕ್ಷ ಸುರೇಂದ್ರ ಕೋಟ್ಯಾನ್, ಕಾರ್ಮಿಕ ಮುಖಂಡರಾದ ರಾಮಣ್ಣ ವಿಟ್ಲ, ಉದಯ ಕುಮಾರ್ ಬಂಟ್ವಾಳ, ಡಿ.ವೈ.ಎಫ್.ಐ. ತಾಲೂಕು ಉಪಾಧ್ಯಕ್ಷ ಸಾಧಿಕ್ ಬಂಟ್ವಾಳ ಮುಂತಾದವರು ಉಪಸ್ಥಿತರಿದ್ದರು. ಬಂಟ್ವಾಳ ತಾಲೂಕು ಡಿ.ವೈ.ಎಫ್.ಐ. ಕಾರ್ಯದರ್ಶಿ ನ್ಯಾಯವಾದಿ ತುಳಸೀದಾಸ್ ವಿಟ್ಲ ಸ್ವಾಗತಿಸಿ, ವಂದಿಸಿದರು.