Tuesday, October 17, 2023

ನಾಳೆ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಬಂಟ್ವಾಳಕ್ಕೆ ಭೇಟಿ

Must read

ಬಂಟ್ವಾಳ: ಕರ್ನಾಟಕ ರಾಜ್ಯ ಸರ್ಕಾರದ ಹಿಂದೂ ಧಾರ್ಮಿಕ ದತ್ತಿ ಮತ್ತು ಮೀನುಗಾರರಿಗೆ ಬಂದರು ಮತ್ತು ಒಳನಾಡು ಸಾರಿಗೆ ಹಾಗೂ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿರವರು (ಆ.15) ನಾಳೆ ಮಧ್ಯಾಹ್ನ 2 ಗಂಟೆಗೆ ಶ್ರೀ ಕ್ಷೇತ್ರ ಪಣೋಲಿಬೈಲು ಕಲ್ಲುಟಿ ದೈವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ.

ಆ ನಂತರ 2.30 ಕ್ಕೆ ಸಜಿಪಮೂಡ ಗ್ರಾಮದ ಗಣಪತಿ ಭಟ್ ರವರ ಕೃಷಿ ಜಮೀನಿನಲ್ಲಿ ರೈತರ ಬೆಳೆ ಸಮೀಕ್ಷೆ ಮೊಬೈಲ್ ಆಪ್‌ನ ಚಾಲನೆ ನೀಡಲಿದ್ದು, ಬಳಿಕ 3.30ಕ್ಕೆ ಬಿ.ಸಿ.ರೋಡ್ ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರಕ್ಕೆ ಭೇಟಿ ನೀಡಲಿದ್ದಾರೆ.

More articles

Latest article