Thursday, October 19, 2023

ಬಂಟ್ವಾಳ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ರೈತ ಕ್ಷೇತ್ರ ಪಾಠ ಶಾಲೆ ಕಾರ್ಯಕ್ರಮ

Must read

ಬಂಟ್ವಾಳ: ಬಂಟ್ವಾಳ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ಬಿ.ಸಿ.)ಟ್ರಸ್ಟ್  ವತಿಯಿಂದ ಬಿಸಿರೋಡ್ ವಲಯದ ಕುರಿಯಾಳ ಒಕ್ಕೂಟದಲ್ಲಿ ಇಂದು ರೈತ ಕ್ಷೇತ್ರ ಪಾಠ ಶಾಲೆ ಕಾರ್ಯಕ್ರಮ ದುರ್ಗಾ ನಗರ ಸಮಾಜ ಮಂದಿರದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಬಿ.ಸಿ.ರೋಡ್ ವಲಯದ ಅಧ್ಯಕ್ಷ ಶೇಖರ ಸಾಮಾನಿ ದೀಪ ಬೆಳಗಿಸಿ ಉದ್ಘಾಟಿಸಿದರು.

ಯೋಜನೆಯ ಬಂಟ್ವಾಳ ತಾಲೂಕಿನ ಕೃಷಿ ಯೋಜನಾಧಿಕಾರಿ, ಜನಾರ್ಧನ್ ಕಾರ್ಯಕ್ರಮದ ಬಗ್ಗೆ ಪ್ರಸ್ತಾವಿಕವಾಗಿ ಮಾಹಿತಿ ನೀಡಿದರು.

ಈ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಪ್ರಗತಿ ಪರ ಕೃಷಿಕ ಚಂದಪ್ಪ ಮೂಲ್ಯಾ ಕೃಷಿಯಲ ಬಗ್ಗೆ ಮಾಹಿತಿ ಹಾಗೂ ಅಡಿಕೆ ತೋಟದ ನಡುವೆ ಬೆಳೆಯಬಲ್ಲ ಇತರ ಉಪ ಬೆಳೆಗಳ ಮಾಹಿತಿ ನೀಡಿದರು.

ಈ ಕಾರ್ಯಕ್ರಮದಲ್ಲಿ ಒಕ್ಕೂಟದ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಕಾರ್ಯಕ್ರಮ ಒಕ್ಕೂಟದ ಸೇವಾ ಪ್ರತಿನಿಧಿ ಅಮಿತಾ ಸ್ವಾಗತಿಸಿ, ವಂದಿಸಿದರು.

More articles

Latest article