ಬೆಳ್ತಂಗಡಿ: ಬಸ್ ನಿಲ್ದಾಣದ ಬಳಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಬೃಹತ್ ಪ್ರತಿಭಟನೆ ನಡೆಯಿತು.
ಕೊರೊನಾ ನಿಯಂತ್ರಿಸಲು ಕೇಂದ್ರ ಸರ್ಕಾರ ಹಾಗು ರಾಜ್ಯ ಸರ್ಕಾರಗಳು ನಡೆಸಿರುವ ಅವ್ಯವಹಾರವನ್ನು ವಿರೋಧಿಸಿ ಮತ್ತು ಕಾಳಜಿ ರಿಲೀಫ್ ಫಂಡ್ ಲೆಕ್ಕಪತ್ರ ನೀಡುವಂತೆ ಒತ್ತಾಯಿಸಿ ಪ್ರತಿಭಟಿಸಿದರು.
ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಮಾಜಿ ಶಾಸಕ ವಸಂತ ಬಂಗೇರ, ಮಾಡಿರುವ ಖರ್ಚುಗಳ ಲೆಕ್ಕಪತ್ರ ಸಲ್ಲಿಸಬೇಕು, ಕಾಳಜಿ ರಿಲೀಫ್ ಫಂಡ್ ಹೆಸರಿನಲ್ಲಿ ರಿಲೀಸ್ ಆದ ಹಣದ ಲೆಕ್ಕ ಪತ್ರ ಸಲ್ಲಿಸಬೇಕು ಎಂದು ತಿಳಿಸಿದರು.
ಶಾಸಕರ ಕಛೇರಿ ಶ್ರಮಿಕದ ಬಳಿ ಸಂಕೇತಿಕವಾಗಿ ಪ್ರತಿಭಟನೆ ನಡೆಸಲು ಸಿದ್ದರಾದಾಗ ಪೋಲಿಸರ ಆಕ್ಷೇಪಿಸಿದಾಗ ಪ್ರತಿಭಟನೆ ಮಾಡಿಯೇ ಮಾಡುತ್ತೇವೆ ಎಂದು ಶಾಸಕರ ಕಛೇರಿಯ ಬಳಿ ಪ್ರತಿಭಟಿಸಿದರು.
ಈ ಸಂದರ್ಭದಲ್ಲಿ ಮಾಜಿ ಶಾಸಕ ವಸಂತ್ ಬಂಗೇರ, ಸಾಹುಲ್ ಹಮೀದ್,ಬ್ಲಾಕ್ ಅಧ್ಯಕ್ಷರುಗಳಾದ ಶೈಲೇಶ್ ಕುಮಾರ್,ರಂಜನ್ ಜಿ ಗೌಡ,ಜಿಲ್ಲಾ ಪಂಚಾಯತ್ ಸದಸ್ಯ ಶೇಕರ ಕುಕ್ಕೇಡಿ ಹಾಗು ವಿವಿಧ ಘಟಕದ ಅಧ್ಯಕ್ಷರು ಕಾರ್ಯಕರ್ತರು ಉಪಸ್ಥಿತರಿದ್ದರು.