Friday, October 27, 2023

ಕಾರು- ಬೈಕ್‌ ಅಪಘಾತ: ಇಬ್ಬರ ಸಾವು

Must read

 

ಪುತ್ತೂರು: ನಿನ್ನೆ ರಾತ್ರಿ ಕಾರು ಮತ್ತು ಬೈಕ್ ನಡುವಿನ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ದಾರುಣವಾಗಿ ಸಾವನ್ನಪ್ಪಿದ್ದ ಘಟನೆ ಪುತ್ತೂರಿನ ನರಿಮೊಗರು ಶಾಲಾ ಬಳಿ ನಡೆದಿದೆ ಎಂದು ವರದಿಯಾಗಿದೆ.
ಕುರಿಯ ಇಡಬೆಟ್ಟು ನಿವಾಸಿಗಳಾದ ಕಟ್ಟತಬೈಲು ಐತ್ತಪ್ಪ ಎಂಬವರ ಪುತ್ರ ಮಿಥುನ್ ಮತ್ತು ಉಮೇಶ್ ಎಂಬವರ ಪುತ್ರ ಭವಿತ್ ಮೃತಪಟ್ಟವರು ಎಂದು ಗುರುತಿಸಲಾಗಿದೆ.

ವೀರಮಂಗಲ ಸಮೀಪ ನಡೆದ ಮದುವೆ ಮೆಹಂದಿ ಕಾರ್ಯಕದೆಮದಲ್ಲಿ ಭಾಗವಹಿಸಿದ ಸಹೋದರರು ಹಿಂತಿರುಗುತ್ತಿದ್ದ ವೇಳೆ ಈ ಅಫಘಾತ ಸಂಭವಿಸಿದೆ. ಮೃತ ಮಿಥುನ್ ನರಿಮೊಗ್ರು ಐ.ಟಿ.ಐ. ವಿದ್ಯಾರ್ಥಿ ಹಾಗೂ ಭವಿತ್ ಸೆಂಟ್ರಿಂಗ್, ಬಾವಿಗೆ ರಿಂಗ್ ಅಳವಡಿಸುವ ವೃತ್ತಿ ನಿರ್ವಹಿಸುತ್ತಿದ್ದರು ಎಂಬ ಮಾಹಿತಿ ಇದೆ. ನರಿಮೊಗರು ಶಾಲೆಯ ಬಳಿ ನಿನ್ನೆ ರಾತ್ರಿ ನಡೆದ ಅಫಘಾತದಲ್ಲಿ ಗಂಭೀರವಾಗಿ ಗಾಯಗೊಂಡು ರಸ್ತೆಯ ಮಧ್ಯೆ ಬಿದ್ದಿದ್ದ ಸವಾರರಿಬ್ಬರನ್ನು ಅದೇ ರಸ್ತೆಯಲ್ಲಿ ಸಂಚಾರ ಮಾಡುತ್ತಿದ್ದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವಠಾರದ ಕಾರ್ಯಾಧ್ಯಕ್ಷ ಅರುಣ್ ಕುಮಾರ್ ಪುತ್ತಿಲ ಗಮನಿಸಿ ತನ್ನ ಕಾರಿನಲ್ಲಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಇಬ್ಬರು ಕೂಡಾ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ಇದೆ.

More articles

Latest article