ಬಂಟ್ವಾಳ: ರಾಜ್ಯದಲ್ಲಿ ಬಿಸಿ ಬಿಸಿ ಸುದ್ದಿಯ ಮಧ್ಯೆ ಬಂಟ್ವಾಳ ತಾಲೂಕಿನಲ್ಲಿಯೂ ಲಕ್ಷಾಂತರ ರೂ. ಮೌಲ್ಯದ ಗಾಂಜಾ ಪತ್ತೆ ಮಾಡಿದ ಬಂಟ್ವಾಳ ನಗರ ಠಾಣಾ ಎಸ್. ಐ. ಅವಿನಾಶ್ ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.
ಬಂಟ್ವಾಳ ಪುರಸಭಾ ವ್ಯಾಪ್ತಿಯ ಪರ್ಲಿಯಾ ನಿವಾಸಿ ಅಹಮ್ಮದ್ ಸಾಬಿತ್ (30) ಬಂಧಿತ ಆರೋಪಿಯಾಗಿದ್ದು, ಇನ್ನೋರ್ವ ಆರೋಪಿ ಪರಾರಿಯಾಗಿದ್ದಾನೆ.
ಬಂಧಿತರ ಕೈಯಿಂದ 39 ಕೆ.ಜಿ. 948 ಗ್ರಾಂ ತೂಕದ 19,97,400 ರೂ ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಅಕ್ರಮವಾಗಿ ಹಣ ಸಂಪಾದನೆ ಮಾಡುವ ಉದ್ದೇಶದಿಂದ ಅಹಮ್ಮದ್ ಸಾಬಿತ್ ಮತ್ತು ಆತನ ಚಿಕ್ಕಮ್ಮನ ಮಗ ಇಬ್ಬರು ಸೇರಿ ಮಾದಕ ವಸ್ತುವಾದ ಗಾಂಜಾವನ್ನು ಪರ್ಲಿಯಾ ಬಾಡಿಗೆ ಕೊಠಡಿಯಲ್ಲಿ ದಾಸ್ತಾನು ಇರಿಸಿದ್ದರು.
ಈ ಬಗ್ಗೆ ಮಾಹಿತಿ ಪಡೆದ ಬಂಟ್ವಾಳ ನಗರ ಠಾಣಾ ಪೋಲೀಸರು ದಾಳಿ ನಡೆಸಿ ಸೊತ್ತುಗಳ ಸಹಿತ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಎಸ್.ಪಿ. ಲಕ್ಮೀಪ್ರಸಾದ್ ಅವರ ನಿರ್ದೇಶನದಂತೆ ಬಂಟ್ವಾಳ ಡಿ.ವೈ.ಎಸ್.ಪಿ. ವೆಲೆಂಟೈನ್ ಡಿ.ಸೋಜ ಅವರ ಮಾರ್ಗದರ್ಶನದಲ್ಲಿ ಬಂಟ್ವಾಳ ವೃತ್ತ ನಿರೀಕ್ಷಕ ಟಿ.ಡಿ.ನಾಗರಾಜ್ ಅವರ ನೇತೃತ್ವದಲ್ಲಿ ಬಂಟ್ವಾಳ ಎಸ್.ಐ. ಅವಿನಾಶ್ ಅವರ ತಂಡ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.