ವಿಟ್ಲ: ಇಡ್ಕಿದು ಗ್ರಾ.ಪಂ ವ್ಯಾಪ್ತಿಯ ಇಡ್ಕಿದು ಸಹಕಾರಿ ಪಂಚಾಮೃತದ ಅಡ್ಯಾಲು ಕರೆ ಶಾಖೆ ಕಬಕದಲ್ಲಿ ಬಿ.ಜೆ.ಪಿ ಮಹಿಳಾ ಮೋರ್ಚಾ ಪುತ್ತೂರು ಗ್ರಾಮಾಂತರ ಮಂಡಲ ವತಿಯಿಂದ ಭಾರತ ಸರಕಾರದ ಆತ್ಮ ನಿರ್ಭರ್ ಭಾರತ್ ಸ್ವ ಉದ್ಯೋಗ ಮಾಹಿತಿ ಶಿಬಿರ ಹಾಗೂ ಸಾಲ ಸೌಲಭ್ಯಗಳ ಮಾಹಿತಿ ಕಾರ್ಯಾಗಾರ ನಡೆಯಿತು.
ಪುತ್ತೂರು ಶಾಸಕ ಸಂಜೀವ ಮಠಂದೂರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಕೇಂದ್ರ ಸರಕಾರದ ಹಲವು ಜನಪರ ಯೋಜನೆಗಳಲ್ಲಿ ಆತ್ಮ ನಿರ್ಭರ್ ಭಾರತ್ ಯೋಜನೆಯು ಒಂದಾಗಿದ್ದು, ಗ್ರಾಮೀಣ ಮತ್ತು ಪಟ್ಟಣ ಪ್ರದೇಶಗಳಲ್ಲಿ ಜೀವನ ನಡೆಸುತ್ತಿರುವವರ ಬಾಳು ಹಸನಾಗಬೇಕು ಮತ್ತು ಸ್ವ ಉದ್ಯೋಗ ಮಾಡಿಕೊಂಡು ನೆಮ್ಮದಿಯ ಬದುಕು ಸಾಗಿಸಲು ಪೂರಕವಾಗಿದೆ. ಕೇಂದ್ರ ಹಾಗೂ ರಾಜ್ಯ ಸರಕಾರದ ಎಲ್ಲಾ ಯೋಜನೆಗಳನ್ನು ಕಟ್ಟ ಕಡೆಯ ಜನಸಾಮಾನ್ಯನಿಗೂ ಮುಟ್ಟುವಂತೆ ಕಾರ್ಯೋನ್ಮುಖವಾಗಬೇಕು ಎಂದರು.
ಸಮಾರಂಭದಲ್ಲಿ ಪುತ್ತೂರು ಬಿ.ಜೆ.ಪಿ ಗ್ರಾಮಾಂತರ ಮಂಡಲದ ಪ್ರ.ಕಾರ್ಯದರ್ಶಿ ಪುರುಷೋತ್ತಮ ಮುಂಗ್ಲಿಮನೆ, ಬಿ.ಜೆ.ಪಿ ಮಹಿಳಾ ಮೋರ್ಚಾ ಪುತ್ತೂರು ಗ್ರಾಮಾಂತರ ಮಂಡಲದ ಉಪಾಧ್ಯಕ್ಷರಾದ ಉಷಾಚಂದ್ರ, ಪ್ರ.ಕಾರ್ಯದರ್ಶಿ ದಯಾನಂದ ಶೆಟ್ಟಿ, ಪುಣಚ ಶಕ್ತಿ ಕೇಂದ್ರದ ಅಧ್ಯಕ್ಷರಾದ ಹರಿಪ್ರಸಾದ್ ಯಾದವ್, ಕಬಕ ತಾಲೂಕು ಪಂಚಾಯಿತಿ ಸದಸ್ಯರಾದ ದಿವ್ಯ ಪುರುಷೋತ್ತಮ, ಬಿ.ಜೆ.ಪಿ ಮಂಡಲದ ಕೋಶಾಧಿಕಾರಿ ರಮೇಶ್ ಭಟ್.ಎಂ.ಎಚ್ ಉಪಸ್ಥಿತರಿದ್ದರು.
ಈ ಕಾರ್ಯಾಗಾರದ ಮಾಹಿತಿ ಶಿಬಿರದಲ್ಲಿ ಸ್ವ ಉದ್ಯೋಗಗಳ ಬಗ್ಗೆ ಪುತ್ತೂರು ವಿವೇಕಾನಂದ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಆಶಾ ಬೆಳ್ಳಾರೆ ಮಾಹಿತಿ ನೀಡಿದರು. ಸಾಲ ಸೌಲಭ್ಯಗಳ ಮಾಹಿತಿಯನ್ನು ಪುತ್ತೂರು ಅಮೂಲ್ಯ ಆರ್ಥಿಕ ಸಾಕ್ಷರತೆ ಕೇಂದ್ರ ಸೀನಿಯರ್ ಕೌನ್ಸಿಲರ್ ಗೋಪಾಲಕೃಷ್ಣ ಭಟ್ ನೀಡಿದರು.
ಈ ಕಾರ್ಯಗಾರದಲ್ಲಿ ವಿವಿಧ ಶಕ್ತಿಕೇಂದ್ರಗಳ ಪ್ರಮುಖರು ಮತ್ತು ಮಹಿಳಾ ಪ್ರತಿನಿಧಿಗಳು ಭಾಗವಹಿಸಿದ್ದರು. ಬಿ.ಜೆ.ಪಿ ಮಹಿಳಾ ಮೋರ್ಚಾ ಪುತ್ತೂರು ಗ್ರಾಮಾಂತರ ಮಂಡಲದ ಅಧ್ಯಕ್ಷೆ ಯಶಸ್ವಿನಿ ಶಾಸ್ತ್ರೀ ಸ್ವಾಗತಿಸಿದರು. ಕುಮಾರಿ ವಿಶಂತಿ ಶೆಟ್ಟಿ ಉರಿಮಜಲು ಪ್ರಾರ್ಥಿಸಿದರು. ಇಡ್ಕಿದು ತಾಲೂಕು ಪಂಚಾಯತ್ ಸದಸ್ಯೆ ವನಜಾಕ್ಷಿ ಎಸ್.ಭಟ್ ವಂದಿಸಿದರು. ಇಡ್ಕಿದು ಶಕ್ತಿ ಕೇಂದ್ರದ ಸಂಚಾಲಕರಾದ ಯಂ. ಸುಧೀರ್ ಕುಮಾರ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.