ಬಂಟ್ವಾಳ: ಅಮ್ಟಾಡಿ ವ್ಯವಸಾಯ ಸೇವಾ ಸಹಕಾರಿ ಸಂಘ(ರಿ) ಇದರ ನೂತನ ಲೊರೆಟ್ಟೊ ಶಾಖೆಯ ಉದ್ಘಾಟನಾ ಸಮಾರಂಭ ಅ.4 ರಂದು ರವಿವಾರ ನಡೆಯಲಿದೆ.
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ, ಮಾಜಿ ಸಚಿವ ರಮಾನಾಥ ರೈ, ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ನಿರ್ದೇಶಕ ಟಿ.ಜಿ. ರಾಜರಾಮ್ ಭಟ್, ಜಿ.ಪಂ. ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಮಂಗಳೂರು ಸಹಕಾರ ಸಂಘಗಳ ಉಪನಿಬಂಧಕ ಸುಧೀರ್ ಕುಮಾರ್, ಲೊರೆಟ್ಟೊ ಚರ್ಚ್ ನ ಧರ್ಮಗುರು ವಂ. ಫ್ರಾನ್ನಿಸ್ ಕ್ರಾಸ್ತಾ, ಮಂಗಳೂರು ಸಹಕಾರ ಅಭಿವೃದ್ಧಿ ಅಧಿಕಾರಿ ತ್ರಿವೇಣಿ ರಾವ್, ಬಂಟ್ವಾಳ ಪುರಸಭಾ ಸದಸ್ಯ ವಾಸು ಪೂಜಾರಿ, ಲೊರೆಟ್ಟೊ ಟಿಪ್ಪು ನಗರ ಉದ್ಯಮಿ ಅಹಮ್ಮದ್ ಬಾವಾ, ಸಂಘದ ಅಧ್ಯಕ್ಷೆ ಮಲ್ಲಿಕಾ ಶೆಟ್ಟಿ ವಿ. ಉಪಾಧ್ಯಕ್ಷ ಆಲ್ವಿನ್ ವಿನಯ್ ಲೊಬೊ,ಆಡಳಿತ ಮಂಡಳಿಯ ನಿರ್ದೇಶಕ ರುಗಳು ಹಾಗೂ ಸಿಬ್ಬಂದಿ ವರ್ಗ ಉಪಸ್ಥಿತರಿರುವರು ಎಂದು ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಜಯ್ ಕುಮಾರ್ ಅಜಿಲ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.