ಮಂಗಳೂರು : ಅಕ್ರಮ ಗೋ ಸಾಗಾಟ ಮಾಡುತ್ತಿದ್ದ ವೇಳೆ ಆರು ಕರುಗಳು ವಾಹನದಿಂದ ರಸ್ತೆಗೆ ಬಿದ್ದ ಘಟನೆ ಇಂದು ಬೆಳಿಗ್ಗೆ ಮಂಗಳೂರಿನಲ್ಲಿ ನಡೆದಿದೆ.
ಕರುಗಳನ್ನು ಅಕ್ರಮವಾಗಿ ಕುದ್ರೋಳಿಯ ಕಸಾಯಿಖಾನೆಗೆ ಸಾಗಿಸಲಾಗುತ್ತಿದ್ದ ವೇಳೆ ಈ ಘಟನೆ ನಡೆದಿದೆ.
ಈ ಘಟನೆಯ ಬಗ್ಗೆ ತಿಳಿದ ವಿಶ್ವ ಹಿಂದೂ ಪರಿಷತ್ (ವಿಎಚ್ಪಿ) ಮತ್ತು ಭಜರಂಗದಳದ ಕಾರ್ಯಕರ್ತರು ಮಣ್ಣಗುಡ್ಡದಲ್ಲಿ ದಿಡೀರ್ ಪ್ರತಿಭಟನೆ ನಡೆಸಿ, ಅಕ್ರಮ ಗೋಸಾಗಾಟ ವಿರುದ್ಧ ಕ್ರಮ ಕೈಗೊಂಡು ಅಕ್ರಮ ಗೋಸಾಗಾಟರನ್ನು ಬಂಧಿಸಬೇಕೆಂದು ಒತ್ತಾಯಿಸಿದ್ದಾರೆ.