Wednesday, October 18, 2023

ಶೇಂದಿ ತೆಗೆಯಲು ಹೋದ ವ್ಯಕ್ತಿ ಶವವಾಗಿ ಪತ್ತೆ

Must read

ಬಂಟ್ವಾಳ: ಶೇಂದಿ ತೆಗೆಯಲು ಹೋದ ವ್ಯಕ್ತಿಯೋರ್ವರು ಸಂಶಯಾಸ್ಪದವಾಗಿ ಮೃತಪಟ್ಟ ಘಟನೆ ಬಂಟ್ವಾಳ ಠಾಣಾ ವ್ಯಾಪ್ತಿಯ ಕರ್ಪೆ ಎಂಬಲ್ಲಿ ನಡೆದಿದೆ.
ಮೃತಪಟ್ಟ ವ್ಯಕ್ತಿಯನ್ನು ಕರ್ಪೆ ನಿವಾಸಿ ನಾರಾಯಣ ಪೂಜಾರಿ (50) ಎಂದು ಗುರುತಿಸಲಾಗಿದೆ.
ಶೇಂದಿ ತೆಗೆಯುವ ಕೆಲಸ ಮಾಡುತ್ತಿದ್ದ ಇವರು ಎಂದಿನಂತೆ ಇವತ್ತು ಕೂಡ ಸಂಜೆ ವೇಳೆ ಮನೆಯಿಂದ ಶೇಂದಿ ತೆಗೆಯಲು ಹೋಗಿದ್ದರು. ರಾತ್ರಿಯಾದರೂ ಮನೆಗೆ ಬಾರದ ಹಿನ್ನೆಲೆ ಹುಡುಕಾಟ ನಡೆಸಿದ ಶೇಂದಿ ಮರದ ಬುಡದಲ್ಲಿ ಮೈ-ಕೈ ಎಲ್ಲಾ ರಕ್ತ -ಸಿಕ್ತ ಸ್ಥಿತಿಯಲ್ಲಿ ಪತ್ತೆಯಾಗಿದೆ.
ನಾರಾಯಣ ಪೂಜಾರಿ ಅವರ ಸಾವಿನ ಬಗ್ಗೆ ಸಾಕಷ್ಟು ಸಂಶಯಗಳು ಮೂಡುತ್ತಿದ್ದು, ಶೇಂದಿ ತೆಗೆಯಲು ಹೋದವರು ಹಾಳೆ ಮರದಿಂದ ಬಿದ್ದು ಮೃತ ಪಟ್ಟಿದ್ದಾರೆಯೇ ಅಥವಾ ಇವರನ್ನು ಕೊಲೆ ಮಾಡಿದ್ದಾರೆಯೇ ಎಂಬುದು ಪೊಲೀಸ್ ತನಿಖೆಯ ನಂತರ ತಿಳಿಯಬೇಕಿದೆ.

ಇವರ ಸಾವಿನ ಬಗ್ಗೆ ಸಾಕಷ್ಟು ಊಹಾಪೋಹಗಳು ಎದ್ದಿದ್ದು, ಘಟನಾ ಸ್ಥಳಕ್ಕೆ ಬಂಟ್ವಾಳ ಠಾಣಾ ವೃತ್ತ ನಿರೀಕ್ಷಕ ಟಿ. ಡಿ. ನಾಗರಾಜ್, ಬಂಟ್ವಾಳ ಗ್ರಾಮಾಂತರ ಎಸ್. ಐ. ಪ್ರಸನ್ನ ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.

More articles

Latest article