Thursday, April 11, 2024

ಅ.31 ರಂದು ವಿದ್ಯುತ್ ವ್ಯತ್ಯಯ

ಬಂಟ್ವಾಳ: 110ಕೆವಿ ನೆಟ್ಲಮುಡ್ನೂರು-ಸಾಲೆತ್ತೂರು ವಿದ್ಯುತ್ ಪ್ರಸರಣ ಮಾರ್ಗದಿಂದ ವಿಟ್ಲ 110 ಕೆವಿ ಉಪಕೇಂದ್ರಕ್ಕೆ ಬಹುಮಂಡಲ ಮತ್ತು ದ್ವಿಪ್ರಸರಣ ಗೋಪುರಗಳ ಮೂಲಕ 0.55 ಕಿ.ಮೀ.ಲಿಲೊ ಮಾರ್ಗದ ನಿರ್ಮಾಣ ಹಾಗೂ 110 ಕೆವಿ ಉಪಕೇಂದ್ರದಲ್ಲಿ ಟರ್ಮಿನಲ್ ಬೇ ನಿರ್ಮಾಣ ಕಾಮಗಾರಿಯ ಭಾಗವಾಗಿ ಅ.31 ರಂದು ಬೆಳಿಗ್ಗೆ 7 ರಿಂದ ಮಧ್ಯಾಹ್ನ 12 ರವರೆಗೆ ವಿಟ್ಲ ವಿದ್ಯುತ್ ಉಪಕೇಂದ್ರದಿಂದ ಹೊರಡುವ ವಿದ್ಯುತ್ ಮಾರ್ಗದಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬಂಟ್ಚಾಳ ಮೆಸ್ಕಾಂನ ಕಾರ್ಯ ನಿರ್ವಾಹಕ ಇಂಜಿನಿಯರ್ ರವರ ಪ್ರಕಟಣೆ ತಿಳಿಸಿದೆ.

More from the blog

ಹಿತೈಷಿ ತರಬೇತಿ ಕೇಂದ್ರದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಫಲಿತಾಂಶದೊಂದಿಗೆ ತೇರ್ಗಡೆ

2023-24ನೇ ಸಾಲಿನ ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಪಾಣೆಮಂಗಳೂರು, ನರಿಕೊಂಬುವಿನಲ್ಲಿರುವ ಹಿತೈಷಿ ತರಬೇತಿ ಕೇಂದ್ರದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಅಂಕಗಳೊಂದಿಗೆ ತೇರ್ಗಡೆಯಾಗಿದ್ದಾರೆ. ಕು.ಕೀರ್ತನ ಶೇ.95.6% ಅಂಕಗಳೊಂದಿಗೆ ಅತ್ಯುತ್ತಮ ಶ್ರೇಣಿಯಲ್ಲಿ ತೇರ್ಗಡೆಯಾಗಿರುತ್ತಾರೆ ಎಂದು ಸಂಸ್ಥೆಯ ಪ್ರಕಟನೆಯಲ್ಲಿ ತಿಳಿಸಲಾಗಿದೆ. 2024-25ನೇ...

ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

ಲೋಕ ಸಭಾ ಚುನಾವಣೆಯ ಹಿನ್ನಲೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರ ಗೆಲುವಿಗಾಗಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಗ್ರಾಮ,ಮನೆ,ಮನ ಅಭಿಯಾನದ ಅಂಗವಾಗಿ ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಬೇಟಿ ನೀಡಿ...

ವಿಟ್ಲ ಕೇಂದ್ರ ಜುಮಾ ಮಸೀದಿ, ಈದುಲ್ ಫಿತರ್

ವಿಟ್ಲ; ವಿಟ್ಲ ಕೇಂದ್ರ ಜುಮಾ ಮಸೀದಿಯಲ್ಲಿ ಈದುಲ್ ಫಿತರ್ ನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಖತೀಬ್ ಮಹಮ್ಮದ್ ನಸೀಹ್ ದಾರಿಮಿ ಉಸ್ತಾದ್ ರವರು ಖುತುಬಾ ಹಾಗೂ ಈದ್ ನಮಾಝ್ ನಿರ್ವಹಿಸಿದರು. ಈದ್ ಸಂಸೇಶ ನೀಡಿದ ಖತೀಬರು "...

ನೋಟ ಮತದಾನ ಅಭಿಯಾನ ಮಾಡುವವರ ವಿರುದ್ಧ ಕಾನೂನು ಕ್ರಮಕ್ಕೆ ತಾ.ಪಂ.ಸದಸ್ಯ ಪ್ರಭಾಕರ್ ಪ್ರಭು ಒತ್ತಾಯ…

ನೋಟ (NOTA) ಮತದಾನ ಅಭಿಯಾನ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮಾಜಿ ತಾ.ಪಂ‌.ಸದಸ್ಯ ಪ್ರಭಾಕರ್ ಪ್ರಭು ಜಿಲ್ಲಾಧಿಕಾರಿಗೆ ಮನವಿ ಮಾಡಿದ್ದಾರೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕೆಲವೊಂದು ವ್ಯಕ್ತಿಗಳು ಮತ್ತು ಸಂಘಟನೆಗಳು...