Tuesday, October 31, 2023

ವಿಟ್ಲ ಜೇಸಿಸ್ ಶಾಲೆಯಲ್ಲಿ ರಾಜ್ಯೋತ್ಸವ ಆಚರಣೆ

Must read

ವಿಟ್ಲ: ವಿಠಲ ಜೇಸಿಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವವನ್ನು ಸರಳ ರೀತಿಯಲ್ಲಿ ಆಚರಿಸಲಾಯಿತು.
ಮುಖ್ಯ ಅತಿಥಿಯಾಗಿ ಸುಬ್ರಮಣ್ಯ ಕುಮಾರಸ್ವಾಮಿ ವಿದ್ಯಾಲಯದ ಶಿಕ್ಷಕಿ ವನಿತಾ ಉದಯಕುಮಾರ್ ಭಾಗವಹಿಸಿದ್ದರು. ಕನ್ನಡ ಶಿಕ್ಷಕಿ ಕವಿತಾ ಗೌಡ ಜೊತೆ ಸೇರಿ ಹಾಡಿದರು. ದೈಹಿಕ ಶಿಕ್ಷಕ ಭಾನುಪ್ರಕಾಶ್ ಕನ್ನಡ ನುಡಿ, ಕನ್ನಡ ಸಂಸ್ಕೃತಿ ಹಾಗೂ ಕನ್ನಡಿಗರ ಸಾಧನೆಯ ಬಗ್ಗೆ ಮಾತನಾಡಿದರು.
ಕನ್ನಡ ಮಾತೆ ಭುವನೇಶ್ವರಿಯ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು. ಸಂಸ್ಥೆಯ ಆಡಳಿತಾಧಿಕಾರಿ ರಾಧಾಕೃಷ್ಣ, ಪ್ರಿನ್ಸಿಪಾಲ್ ಜಯರಾಮ ರೈ, ವೈಸ್ ಪ್ರಿನ್ಸಿಪಾಲ್ ಜ್ಯೋತಿ ಶೆಣೈ, ಹೇಮಲತಾ ಉಪಸ್ಥಿತರಿದ್ದರು. ಕನ್ನಡ ಶಿಕ್ಷಕಿ ಕವಿತಾ ಗೌಡ ಕಾರ್ಯಕ್ರಮ ಸಂಯೋಜಿಸಿದರು.

 

More articles

Latest article