ವಿಟ್ಲ: ಕೆನರಾ ಬ್ಯಾಂಕ್ ಅಜ್ಜಿನಡ್ಕ ಶಾಖೆ, ಪುಣಚ ಗ್ರಾಮ ಪಂಚಾಯಿತಿ, ಕರ್ನಾಟಕ ರಾಜ್ಯ ರೈತಸಂಘ, ಹಸಿರುಸೇನೆ, ನಾಗರಿಕ ಹಿತರಕ್ಷಣಾ ವೇದಿಕೆ ಪುಣಚ ಇವರ ಸಹಯೋಗದೊಂದಿಗೆ ಕೇಂದ್ರ ಸರಕಾರದ ಜನಪರ ಯೋಜನೆಗಳು ಮತ್ತು ಬ್ಯಾಂಕ್ ಸೇವೆಗಳ ಮಾಹಿತಿ ಹಾಗೂ ಗ್ರಾಹಕರೊಂದಿಗೆ ಸಂವಾದ ಕಾರ್ಯಕ್ರಮ ನ.10 ರಂದು ಪುಣಚ ಗ್ರಾಮ ಪಂಚಾಯಿತಿಯ ಸಭಾ ಭವನದಲ್ಲಿ ಬೆಳಗ್ಗೆ 10.30ಕ್ಕೆ ನಡೆಯಲಿದೆ. ಕೆನರಾ ಬ್ಯಾಂಕ್ ಪುತ್ತೂರು ಪ್ರಾದೇಶಿಕ ಕಚೇರಿಯ ಮುಖ್ಯ ಪ್ರಬಂಧಕ, ಲೀಡ್ ಬ್ಯಾಂಕ್ ಅಧಿಕಾರಿಗಳು, ಅಜ್ಜಿನಡ್ಕ ಕೆನರಾ ಬ್ಯಾಂಕ್ ಶಾಖಾ ಪ್ರಬಂಧಕ, ನಬಾರ್ಡ್ ಉಪ ನಿರ್ದೇಶಕರು ಭಾಗವಹಿಸಲಿದ್ದಾರೆ.