ಮಂಗಳೂರು: ನಗರದಲ್ಲಿ ಮೀನುಗಾರಿಕೆಗೆ ತೆರಳಿದ್ದ ಬೋಳಾರದ ಶ್ರೀರಕ್ಷಾ ಮೀನುಗಾರಿಕಾ ಬೋಟ್ ಮಗುಚಿ ಬಿದ್ದು, ಆರು ಮಂದಿ ಮೀನುಗಾರರು ನಾಪತ್ತೆಯಾಗಿರುವ ಬಗ್ಗೆ ವರದಿಯಾಗಿದೆ.
ಬೋಟ್ನಲ್ಲಿ 20 ಮೀನುಗಾರರಿದ್ದು, 16 ಮಂದಿ ಡಿಂಗಿಯಲ್ಲಿ ಕುಳಿತು ದಡ ಸೇರಿದ್ದಾರೆ. 6 ಮಂದಿ ನಾಪತ್ತೆಯಾಗಿದ್ದಾರೆ. ಕರಾವಳಿ ಕಾವಲು ಪಡೆಯ ಅಧಿಕಾರಿಗಳ ತಂಡ ಶೋಧ ಕಾರ್ಯ ಆರಂಭಿಸಿದೆ. ಬೋಟ್ನಲ್ಲಿ ಮೀನು ಲೋಡ್ ಅಧಿಕವಾಗಿದ್ದರಿಂದ ದುರಂತ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ.