ಮಂಗಳೂರು: ನಗರದಲ್ಲಿ ಉಗ್ರರ ಪರ ಗೋಡೆಬರಹ ಬರೆದು ಆತಂಕ ಮೂಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮತ್ತೋರ್ವ ಆರೋಪಿಯನ್ನು ಮಂಗಳೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬಂಧಿತ ಆರೋಪಿಗಳ ಸಂಬಂಧಿ, ತೀರ್ಥಹಳ್ಳಿ ಮೂಲದ ಸಾದತ್ ಬಂಧಿತ ಆರೋಪಿ.
ವಶದಲ್ಲಿರುವ ಆರೋಪಿಯು ಪ್ರಕರಣದ ಮೊದಲ ಆರೋಪಿ ಮುಹಮ್ಮದ್ ಶಾರೀಕ್ನ ಸಂಬಂಧಿ ಎನ್ನಲಾಗಿದೆ. ಪ್ರಕರಣದಲ್ಲಿ ಈಗಾಗಲೇ ಇಬ್ಬರನ್ನು ಬಂಧಿಸಲಾಗಿದ್ದು, ಮೂರನೇ ಆರೋಪಿಯನ್ನು ತೀರ್ಥಹಳ್ಳಿಯಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.