Saturday, April 6, 2024

ಪೊಳಲಿಯಲ್ಲಿ ಡಿ.12-15ರ ವರೆಗೆ ಭಜನಾ ಮಹೋತ್ಸವ

ಬಂಟ್ವಾಳ: ಪೊಳಲಿ ಶ್ರೀ ಓಂಕಾರ ಅಖಿಲೇಶ್ವರ ಭಜನಾ ಮಂಡಳಿಯ ವತಿಯಿಂದ ಪಂಚಮ ವರ್ಷದ 72 ಗಂಟೆಗಳ ಆಹೋರಾತ್ರಿ ಏಕಾಹ ಭಜನಾ ಮಹೋತ್ಸವವು ಶ್ರೀ ಅಖಿಲೇಶ್ವರ ದೇವಸ್ಥಾನದಲ್ಲಿ ಡಿ.12-15 ರ ಸೂರ್ಯೋದಯದ ವರೆಗೆ ನಡೆಯಲಿದೆ ಎಂದು ಭಜನಾ ಮಂಡಳಿಯ ಯಶೋಧರ ಅಡ್ಡೂರು ತಿಳಿಸಿದ್ದಾರೆ.

ನಿನ್ನೆ(ಡಿ.9) ಸಂಜೆ ಬಂಟ್ವಾಳ ಪ್ರೆಸ್ ಕ್ಲಬ್ ನಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಡಿ.12 ರಂದು ಸೂರ್ಯೋದಯ ಸಮಯದಲ್ಲಿ ಪೊಳಲಿ ಶ್ರೀ ರಾಮಕೃಷ್ಣ ತಪೋವನದ ಶ್ರೀ ವಿವೇಕಾ ಚೈತನ್ಯಾನಂದ ಸ್ವಾಮೀಜಿ ದೀಪಪ್ರಜ್ವಲನೆಗೈದು ಭಜನಾ ಮಹೋತ್ಸವಕ್ಕೆ ಚಾಲನೆ ನೀಡಲಿದ್ದಾರೆ ಎಂದರು. 15 ರಂದು ಸೂರ್ಯೋದಯಕ್ಕೆ ಭಜನಾ ಮಂಗಲೋತ್ಸವ ನಡೆಲಿದೆ ವಿವಿದೆಡೆಯ ಸುಮಾರು 38 ಭಜನಾ ತಂಡಗಳು ಈ ಭಜನಾ ಮಹೋತ್ಸವದಲ್ಲಿ ಪಾಲ್ಗೊಳ್ಳಲಿದೆ ಎಂದ ಅವರು ಡಿ.10ರಂದು ಸಂಜೆ ಪೊಳಲಿ ದೇವಸ್ಥಾನದಿಂದ ಶ್ರೀ ಅಖಿಲೇಶ್ವರ ದೇವಸ್ಥಾನದ ವರೆಗೆ ಹೊರೆಕಾಣಿಕೆ ಮೆರವಣಿಗೆ ನಡೆಯಲಿದೆ ಎಂದು ಹೇಳಿದರು.

ಈ ಭಜನಾ ಮಹೋತ್ಸವದಲ್ಲಿ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿ,ಮಾಣಿಲ ಶ್ರೀ ಮೋಹನದಾಸ್ ಸ್ವಮೀಜಿ, ಆರ್.ಎಸ್.ಎಸ್. ಮುಖಂಡ ಡಾ. ಪ್ರಭಾಕರ ಭಟ್ ಸೇರಿದಂತೆ ಹಲವಾರು ಗಣ್ಯರು ಭಾಗವಹಿಸಲಿದ್ದಾರೆ ಎಂದು ತಿಳಿಸಿದ ಅವರು, ಇದೇ ವೇಳೆ ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಸಹಯೋಗದಲ್ಲಿ ಭಜನಾ ಸಮಾವೇಶ ಸಂಪನ್ನಗೊಳ್ಳಲಿದೆ. ಭಜನಾ ಮಹೋತ್ಸವದ ಕೊನೆಗೆ “ಆನಂದ ಭಜನೆ”ಯು ನಡೆಯುವುದು. ಕೋವಿಡ್ ನಿಯಮವನ್ನು ಪಾಲಿಸಿಕೊಂಡು ಭಜನಾ ಮಹೋತ್ಸವ ನಡೆಸಲಾಗುತ್ತಿದೆ ಎಂದರು. ಭಜನಾ ಮಂಡಳಿಯ ಪದಾಧಿಕಾರಿಗಳಾದ ಹರೀಶ್ ಎಸ್. ಮಣಿಕಂಠಪುರ, ಸುಮನ್ ರಾಜ್ ಪೊಳಲಿ, ಮುರಳಿ ಪೊಳಲಿ ಉಪಸ್ಥರಿದ್ದರು.

More from the blog

ಗ್ರಾಮೀಣ ಪುನರ್ವಸತಿ ಕಾರ್ಯಕತರಿಗೆ ಮತದಾನ ಜಾಗೃತಿ

ಬಂಟ್ವಾಳ ತಾಲೂಕು ಪಂಚಾಯತ್, ತಾಲೂಕು ಕಚೇರಿ ಹಾಗೂ ತಾಲೂಕು ಸ್ವೀಪ್ ಸಮಿತಿಯಿಂದ ಗ್ರಾಮೀಣ ಪುನರ್ವಸತಿ ಕಾರ್ಯಕತರಿಗೆ ಮತದಾನ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ತಾಲೂಕು ಆಡಳಿತ ಸೌಧದಿಂದ ಹಮ್ಮಿಕೊಂಡ ಜಾಥಾ ಬಿ.ಸಿ.ರೋಡ್ ಖಾಸಗಿ ಬಸ್ ನಿಲ್ದಾಣ...

ಭಾರತೀಯ ಜನತಾ ಪಾರ್ಟಿ ಸ್ಥಾಪನಾ ದಿನದ ಅಂಗವಾಗಿ ಬಂಟ್ವಾಳ ಮಂಡಲ ಬಿಜೆಪಿ ಕಾರ್ಯಾಲಯದಲ್ಲಿ ಧ್ವಜಾರೋಹಣ

ಭಾರತೀಯ ಜನತಾ ಪಾರ್ಟಿ ಸ್ಥಾಪನಾ ದಿನದ ಅಂಗವಾಗಿ ಬಂಟ್ವಾಳ ಮಂಡಲದ ಅಧ್ಯಕ್ಷರಾದ ಆರ್ ಚೆನ್ನಪ್ಪ ಕೋಟ್ಯಾನ್ ಅವರು ಮಂಡಲ ಬಿಜೆಪಿ ಕಾರ್ಯಾಲಯದಲ್ಲಿ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಪ್ರಮುಖರಾದ ದೇವಪ್ಪ ಪೂಜಾರಿ,ರವೀಶ್ ಶೆಟ್ಟಿ, ಡೊಂಬಯ...

ರಾಜ್ಯದಲ್ಲಿ 60 ಮಂದಿಯ ನಾಮಪತ್ರ ತಿರಸ್ಕೃತ

ಬೆಂಗಳೂರು: ಲೋಕಸಭಾ ಚುನಾವಣೆಗೆ ರಾಜ್ಯದ ಮೊದಲ ಹಂತದ 14 ಕ್ಷೇತ್ರಗಳಲ್ಲಿ 358 ಅಭ್ಯರ್ಥಿಗಳು 492 ನಾಮಪತ್ರ ಸಲ್ಲಿಸಿದ್ದು, ಇದರಲ್ಲಿ 13 ಕ್ಷೇತ್ರದಲ್ಲಿ ಪರಿಶೀಲನೆ ಕಾರ್ಯ ಮುಗಿದಿದೆ. 276 ನಾಮಪತ್ರಗಳು ಕ್ರಮಬದ್ಧವಾಗಿದ್ದು, 60 ನಾಮಪತ್ರಗಳು...

ಮಂಗಳೂರು: ‘ಸ್ವೀಟ್ ಸಿಂಫನಿ ಇನ್ಸ್ಟಿಟ್ಯೂಟ್ ಆಫ್ ಮ್ಯೂಸಿಕ್’ ಸಂಸ್ಥೆಯ ಸಂಗೀತ ಕ್ಷೇತ್ರದಲ್ಲಿ ಸಂಪುಟ 2′ ರ ನೂತನ ಕೃತಿ ಲೋಕಾರ್ಪಣೆ

ಮಂಗಳೂರು: ಮಂಗಳೂರಿನ ಕುಲಶೇಖರದಲ್ಲಿರುವ 'ಸ್ವೀಟ್ ಸಿಂಫನಿ ಇನ್ಸ್ಟಿಟ್ಯೂಟ್ ಆಫ್ ಮ್ಯೂಸಿಕ್' ಸಂಸ್ಥೆಯ ಪ್ರಕಾಶನದಲ್ಲಿ ಇಂಗ್ಲಿಷ್, ಹಿಂದಿ ಮತ್ತು ಕನ್ನಡದ ಜನಪ್ರಿಯ ಹಾಡುಗಳನ್ನು ಪಾಶ್ಚಿಮಾತ್ಯ ನೊಟೇಶನ್ ಮೂಲಕ ವಯಲಿನ್, ಗಿಟಾರ್ ಮತ್ತು ಕೀಬೋರ್ಡ್ ನಲ್ಲಿ...