ಪೊಳಲಿ: ಶ್ರೀ ರಾಜರಾಜೇಶ್ವರೀ ದೇವಸ್ಥಾನದಲ್ಲಿ ಷಷ್ಠಿ ಪ್ರಯುಕ್ತ ಬೆಳ್ಳಿ ರಥೋತ್ಸವ, ಸಣ್ಣ ರಥೋತ್ಸವ ಭಾನುವಾರ ನಡೆಯಿತು.
ದೇವಳದ ತಂತ್ರಿಗಳಾದ ಸುಬ್ರಹ್ಮಣ್ಯ ತಂತ್ರಿ, ವೆಂಕಟೇಶ್ ತಂತ್ರಿ ಪೂಜಾ ವಿಧಿವಿಧಾನಗಳನ್ನು ನೆರವೇರಿಸಿದ ಬಳಿಕ ಸುಬ್ರಹ್ಮಣ್ಯ ದೇವರ ಬಲಿ ಉತ್ಸವ ನಡೆದು ದೇವರು ಬೆಳ್ಳಿ ರಥದಲ್ಲಿ ಹಾಗೂ ಷಷ್ಠಿರಥವನ್ನು ಬಕ್ತಾಧಿಗಳು ಒಂದು ಸುತ್ತು ಎಳೆಯಲಾಯಿತು.
ದೇವಳದ ಅರ್ಚಕರಾದ ಮಾಧವ ಭಟ್, ನಾರಾಯಣ ಭಟ್, ರಾಮ್ ಭಟ್, ಆದರ್ಶ ಭಟ್ ಹಾಗೂ ದೇವಳದ ಆಡಳಿತ ಮೊಕ್ತೇಸರ ಡಾ.ಮಂಜಯ್ಯ ಶೆಟ್ಟಿ ಅಮ್ಮುಂಜೆಗುತ್ತು,ಯು. ತಾರಾನಾಥ ಆಳ್ವ, ಚೇರಾ ಸೂರ್ಯನಾರಾಯಣ ರಾವ್ ಹಾಗೂ ಸಾವಿರ ಸೀಮೆಯ ಭಕ್ತಾಧಿಗಳು ಉಪಸ್ಥಿತರಿದ್ದರು.