ವಿಟ್ಲ: ಯುವಕನೊಬ್ಬ ಟೆರೇಸ್ ನಿಂದ ಬಿದ್ದು ಮೃತಪಟ್ಟ ಘಟನೆ ಕೇಪು ಗ್ರಾಮದಲ್ಲಿ ನಡೆದಿದೆ.
ಬೆಳ್ತಂಗಡಿ ನಿವಾಸಿ ಪ್ರಸಾದ್ ಆಚಾರ್ಯ(28) ಮೃತಪಟ್ಟವರು.
ಪ್ರಸಾದ್ ಆಚಾರ್ಯ ಕೇಪು ಕುಕ್ಕೆಬೆಟ್ಟುವಿನಲ್ಲಿ ಸಂಬಂಧಿಕರ ಮನೆಯಲ್ಲಿ ಚಿನ್ನದ ಕೆಲಸವನ್ನು ಮಾಡುತ್ತಿದ್ದರು.
ನಿನ್ನೆ ತಡರಾತ್ರಿ ಟೆರೇಸ್ ನಿಂದ ಬಿದ್ದಿದ್ದಾರೆ. ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ವಿಟ್ಲದ ಕಡೆಗೆ ಬರುತ್ತಿದ್ದಾಗ ದಾರಿ ಮಧ್ಯೆ ಸಾವನ್ನಪ್ಪಿದರು.
ಮೃತ ದೇಹವನ್ನು ಮರಣೋತ್ತರ ಪರೀಕ್ಷೆ ಗಾಗಿ ದೇರಳಕಟ್ಟೆ ಆಸ್ಪತ್ರೆಗೆ ಕೊಂಡೊಯ್ಯಲಾಗಿತ್ತು.
ವಿಟ್ಲ ಪೋಲೀಸರು ಈ ಪ್ರಕರಣದ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.