ಬಂಟ್ವಾಳ : ಸಿದ್ದಕಟ್ಟೆ ಸಹಕಾರಿ ವ್ಯವಸಾಯಿಕ ಸಂಘ, ನಿ.ಇದರ 2019-20 ನೇ ಸಾಲಿನ ಮಹಾಸಭೆ ಸಂದರ್ಭದಲ್ಲಿ ಕಂಬಳ ಕ್ಷೇತ್ರದಲ್ಲಿ ಗಣನೀಯ ಸೇವೆಸಲ್ಲಿಸಿ ಅತೀ ವೇಗದ ಓಟದ ಖ್ಯಾತಿಗೆ ಬಾಜನರಾಗಿ ಕರ್ನಾಟಕ ರಾಜ್ಯದ ಕ್ರೀಡಾರತ್ನ ಪ್ರಶಸ್ತಿ ಪಡಕೊಂಡ ಸುರೇಶ್ ಶೆಟ್ಟಿ , ಹಕ್ಕೇರಿ ರವರನ್ನು ಸಂಘದ ಅಧ್ಯಕ್ಷ ಪ್ರಭಾಕರ ಪ್ರಭು ಸಂಘದ ವತಿಯಿಂದ ಗೌರವಿಸಿದರು. ಸಂಘದ , ಉಪಾಧ್ಯಕ್ಷ ಸತೀಶ್ ಪೂಜಾರಿ ನಿರ್ದೇಶಕರಾದ ಪದ್ಮರಾಜ್ ಬಲ್ಲಾಳ್, ಸಂದೇಶ ಶೆಟ್ಟಿ, ರಾಜೇಶ್ ಶೆಟ್ಟಿ, ಹರೀಶ್ ಆಚಾರ್ಯ, ಉಮೇಶ್ ಗೌಡ, ದಿನೇಶ್ ಪೂಜಾರಿ, ದೇವರಾಜ್ ಸಾಲಿಯಾನ್, ಜಾರಪ್ಪ ನಾಯ್ಕ, ವೀರಪ್ಪ ಪರವ, ಮಂದಾರತಿ ಶೆಟ್ಟಿ, ಅರುಣ ಶೆಟ್ಟಿ, ಮಾಧವ ಶೆಟ್ಟಿಗಾರ್, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆರತಿ ಶೆಟ್ಟಿ ಉಪಸ್ಥಿತರಿದ್ದರು.