Sunday, October 22, 2023

ದಯಾನಂದ ಕತ್ತಲ್ ಸಾರ್ ಅವರ ಕಾರಿಗೆ ಮೀನಿನ ಲಾರಿ ಡಿಕ್ಕಿ

Must read

ಬಂಟ್ವಾಳ: ಲಾರಿ ಮತ್ತು ಕಾರಿನ ನಡುವೆ ಮಂಗಳೂರಿನಲ್ಲಿ ಮುಂಜಾನೆ ವೇಳೆ ನಡೆದ ಅಪಘಾತದಲ್ಲಿ ತುಳು ಅಕಾಡೆಮಿ ಅಧ್ಯಕ್ಷ ದಯಾನಂದ ಕತ್ತಲ್ ಸಾರ್ ಅವರು ಗಾಯಗೊಂಡ ಘಟನೆ ನಡೆದಿದೆ. ಗಾಯಗೊಂಡ ಅವರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಶನಿವಾರ (ಇಂದು)ಬೆಳಿಗ್ಗೆ 5.15 ರ ಸುಮಾರಿಗೆ ನಂತೂರು ಜಂಕ್ಷನ್ ಬಳಿ ಮೀನಿನ ಲಾರಿ ದಯಾನಂದ ಕತ್ತಲ್ ಸಾರ್ ಅವರು ಪ್ರಯಾಣಿಸುತ್ತಿದ್ದ ಕಾರಿಗೆ ಡಿಕ್ಕಿ ನಡೆದಿದೆ. ದಯಾನಂದ ಕತ್ತಲ್ ಸಾರ್ ಅವರು ತಮ್ಮ ಕಾರಿನಲ್ಲಿ ಬಿಕರ್ನಕಟ್ಟೆಯಿಂದ ನಂತೂರು ಕಡೆಗೆ ತೆರಳುತ್ತಿದ್ದರು ಎನ್ನಲಾಗಿದೆ.

ಘಟನೆಯಲ್ಲಿ ದಯಾನಂದ ಕತ್ತಲ್ ಸಾರ್ ಅವರಿಗೆ ತಲೆಗೆ ಗಾಯಗಳಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ.   ಮಂಗಳೂರು ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

More articles

Latest article