Tuesday, April 16, 2024

ಶ್ರೀರಾಮ ಪ್ರಥಮದರ್ಜೆ ಮಹಾವಿದ್ಯಾಲಯದ ಗಣಿತ ಪ್ರಯೋಗಶಾಲೆಯ ಉದ್ಘಾಟನೆ

ಕಲ್ಲಡ್ಕ: ಬಂಟ್ವಾಳ ಫೆ.16 ಶ್ರೀರಾಮ ಪ್ರಥಮ ದರ್ಜೆ ಮಹಾವಿದ್ಯಾಲಯ ಕಲ್ಲಡ್ಕ ‘ಶಕುಂತಲಾದೇವಿ’ ಗಣಿತ ಶಾಸ್ತ್ರ ಪ್ರಯೋಗಶಾಲೆಯ ಉದ್ಘಾಟನೆಯನ್ನು ಕಿಯೋನಿಕ್ಸ್ ಸಂಸ್ಥೆಯ ಅಧ್ಯಕ್ಷರಾದ ಹರಿಕೃಷ್ಣ ಬಂಟ್ವಾಳ ಮಾಡಿದರು.

ಮುಖ್ಯ ಅತಿಥಿಗಳಾಗಿ ಮಂಗಳೂರು ವಿಶ್ವವಿದ್ಯಾನಿಲಯದ ಕುಲಸಚಿವರಾದ ರಾಜು ಮೊಗವೀರ ಭಾಗವಹಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಡಾ.ಪ್ರಭಾಕರ್ ಭಟ್ ವಹಿಸಿಕೊಂಡಿದ್ದರು. ವೇದಿಕೆಯಲ್ಲಿ  ಸಂಸ್ಥೆಯ ಸಂಚಾಲಕರಾದ ವಸಂತ ಮಾದವ, ಆಡಳಿತ ಮಂಡಳಿಯ ಸದಸ್ಯರಾದ ನಾಗೇಶ್ ಇರಾ ಹಾಗೂ ಕಾಲೇಜಿನ ಪ್ರಾಂಶುಪಾಲರಾದ ಕೃಷ್ಣಪ್ರಸಾದ ಕಾಯರ್ ಕಟ್ಟೆ ಉಪಸ್ಥಿತರಿದ್ದರು. ಉಪನ್ಯಾಸಕರಾದ ಕವಿತಾ ಸ್ವಾಗತಿಸಿ ಹರ್ಷಿತಾ ವಂದಿಸಿ ಸುಬ್ರಹ್ಮಣ್ಯ ಕಾರ್ಯಕ್ರಮ ನಿರೂಪಿಸಿದರು.

More from the blog

ಅಪಘಾತ ವಿಚಾರದಲ್ಲಿ ಗಂಡ ಹೆಂಡತಿಗೆ ನಾಲ್ವರು ಹಲ್ಲೆ : ಬಜರಂಗದಳ, ವಿ.ಹಿಂ.ಪರಿಷತ್ ಕಲ್ಲಡ್ಕ ಪ್ರಖಂಡದಿಂದ ಖಂಡನೆ

ಬಂಟ್ವಾಳ: ಅಪಘಾತ ವಿಚಾರದಲ್ಲಿ ಗಂಡ ಹೆಂಡತಿಗೆ ನಾಲ್ವರು ಹಲ್ಲೆ ನಡೆಸಿದ ಘಟನೆ ಕಲ್ಲಡ್ಕದ ಕರಿಂಗಾನ ಕ್ರಾಸ್ ಎಂಬಲ್ಲಿ ಸಂಜೆ ವೇಳೆ ನಡೆದಿದೆ. ಪುತ್ತೂರು ಏರ್ಮುಂಜ ಪಲ್ಲ ನಿವಾಸಿಗಳಾದ ಮಂಜುನಾಥ್ ಮತ್ತು ಅವರ ಪತ್ನಿ ಪೂರ್ಣಿಮಾ...

ಪುಣಚ ವಲಯ ಕಾಂಗ್ರೆಸ್ ಸಮಿತಿ ಕಾರ್ಯಕರ್ತರ ಸಭೆ

ವಿಟ್ಲ - ಪುಣಚ ವಲಯ ಕಾಂಗ್ರೆಸ್ ಸಮಿತಿ ಕಾರ್ಯಕರ್ತರ ಸಭೆ ನೀರುಮಜಲು ಬ್ರಹ್ಮ ಬೈದರ್ಕಳ ಗರಡಿ ಕ್ಷೇತ್ರದ ವಠಾರದಲ್ಲಿ ನಡೆಯಿತು. ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಮಾತನಾಡಿ ಕಳೆದ...

ಕೆನರಾ ರೊಬೆಕೋ ಸಂಸ್ಥೆಯಿಂದ ಕೊಯಿಲ ಶಾಲಾ ವಿದ್ಯಾರ್ಥಿಗಳಿಗೆ ಬೈಸಿಕಲ್ ಕೊಡುಗೆ

ಬಂಟ್ವಾಳ: ತಾಲೂಕಿನ ಕೊಯಿಲ ಸರ್ಕಾರಿ ಪ್ರೌಢಶಾಲೆ ಇಲ್ಲಿನ ವಿದ್ಯಾರ್ಥಿಗಳಿಗೆ ಕೆನರಾ ರೊಬೆಕೋ ಸಂಸ್ಥೆಯ ವತಿಯಿಂದ 45 ಬೈಸಿಕಲ್ ಗಳನ್ನು ವಿತರಿಸಲಾಯಿತು. ಕೆನರಾ ರೊಬೆಕೋ ಸಂಸ್ಥೆಯ ಮಂಗಳೂರು ವಿಭಾಗದ ವ್ಯವಸ್ಥಾಪಕರಾದ ಮುರಳೀಧರ ಶೆಣೈ, ಅಧಿಕಾರಿ ರಾಜೇಶ್...

ಹಿಂದುಳಿದ ವರ್ಗದ ಶ್ರೇಯೋಭಿವೃದ್ಧಿಗಾಗಿ ಕೆಲಸ- ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ

ಸುರತ್ಕಲ್: ರಾಜಕೀಯವಾಗಿ ಸಿಕ್ಕ ಅವಕಾಶವನ್ನು ಸಾಮಾಜಿಕ ಶ್ರೇಯೋಭಿವೃದ್ಧಿಗೆ ಬಳಸಿಕೊಳ್ಳಲಾಗುವುದು ಎಂದು ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿ ಹೇಳಿದರು. ಪಣಂಬೂರು ಸುಂದರಿ ಲಕ್ಷ್ಮಣ್ ಬಂಗೇರ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದರು. ...