ಅಡಿಕೆ ಬೆಳೆಯನ್ನು ಕಾಡುತ್ತಿರುವ ಹಳದಿ ಎಲೆ ರೋಗದ ಸಮಸ್ಯೆಗೆ ಪರಿಹಾರವನ್ನು ಹಾಗೂ ಅಡಕೆ ಬೆಳೆಯೊಂದಿಗೆ ಇತರೆ ಪರ್ಯಾಯ/ಉಪ ಬೆಳೆಗಳನ್ನು ಪ್ರೋತ್ಸಾಹಿಸುವ ಸಲುವಾಗಿ ಮುಂಬರುವ ಬಜೆಟಿನಲ್ಲಿ ವಿಶೇಷ ಪ್ಯಾಕೆಜ್ ಘೋಷಿಸಬೇಕೆಂದು ಕರ್ನಾಟಕ ರಾಜ್ಯ ಸರ್ಕಾರದ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಿ.ಎಸ್.ಯಡಿಯೂರಪ್ಪನವರ ಬಳಿ ದಕ್ಷಿಣ ಕನ್ನಡ, ಉಡುಪಿ, ಕೊಡಗು ಹಾಗೂ ಶಿವಮೊಗ್ಗ ಜಿಲ್ಲೆಯ ಶಾಸಕರ ನಿಯೋಗದೊಂದಿಗೆ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ತೆರಳಿ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ತೋಟಗಾರಿಕಾ ಸಚಿವರಾದ ಶ್ರೀ ಆರ್.ಶಂಕರ್,ಬಂದರು ಮತ್ತು ಮೀನುಗಾರಿಕಾ ಸಚಿವ ಎಸ್.ಅಂಗಾರ, ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವರು ಹಾಗೂ ಮುಜರಾಯಿ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಶಾಸಕರುಗಳು ಉಪಸ್ಥಿತರಿದ್ದರು.