Friday, October 20, 2023

ಪೂಜಾರಿಯವರ ಮನೆಗೆ ಧ್ರುವನಾರಾಯಣ್ ಭೇಟಿ

Must read

ಬಂಟ್ವಾಳ: ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ್ ರವರು ಇಂದು ಉಡುಪಿಯಲ್ಲಿ ಪಕ್ಷದ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಬಂಟ್ವಾಳಕ್ಕೆ ತೆರಳಿ ತಮ್ಮ ರಾಜಕೀಯ ಗುರು, ಹಿರಿಯ ಕಾಂಗ್ರೆಸ್ ಮುತ್ಸದ್ದಿ, ಮಾಜಿ ಕೇಂದ್ರ ಸಚಿವ ಬಿ.ಜನಾರ್ದನ ಪೂಜಾರಿಯವರ ಮನೆಗೆ ಭೇಟಿ ನೀಡಿ ಅವರ ಯೋಗ ಕ್ಷೇಮ ವಿಚಾರಿಸಿ, ಅವರ ಆಶೀರ್ವಾದ ಪಡೆದರು. ಅವರೊಂದಿಗೆ ಕಾಂಗ್ರೆಸ್ ಮುಖಂಡರುಗಳಾದ ಎಂ. ಎ. ಗಫೂರ್, ಪ್ರಸಾದ್ ರಾಜ್ ಕಾಂಚನ್ ಉಪಸ್ಥಿತರಿದ್ದರು.

More articles

Latest article