Wednesday, April 17, 2024

ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗಣ್ಯರಿಗೆ ಅಭಿನಂದನಾ ಕಾರ್ಯಕ್ರಮ

ಬಂಟ್ವಾಳ: ಇಲ್ಲಿನ ಸ್ವರ್ಣೋದ್ಯಮಿಗಳಾದ ವಿ.ಎನ್.ಆರ್. ಗೋಲ್ಡ್ ವತಿಯಿಂದ ನಾಗೇಂದ್ರ ಬಾಳಿಗಾ ಅವರ ನೇತೃತ್ವದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗಣ್ಯರನ್ನು ಅಭಿನಂದಿಸುವ ಕಾರ್ಯ ಶನಿವಾರ ರಾತ್ರಿ ವಿ.ಎನ್.ಆರ್. ಗೋಲ್ಡ್ ಹಿಂದುಗಡೆಯ ಪ್ರಾಂಗಣದಲ್ಲಿ ನಡೆದ ಸಮಾರಂಭದಲ್ಲಿ ನಡೆಯಿತು.

 

      

ಈ ಸಂದರ್ಭ ಬಂಟ್ವಾಳ ವೃತ್ತನಿರೀಕ್ಷಕ ಟಿ.ಡಿ.ನಾಗರಾಜ್, ಸರ್ಕಾರಿ ಆಸ್ಪತ್ರೆಯ ನಿವೃತ್ತ ವೈದ್ಯಾಧಿಕಾರಿ ಡಾ. ಸುರೇಂದ್ರ ನಾಯಕ್, ಹೆಡ್ ಕಾನ್ಸ್ ಟೇಬಲ್ ಉದಯ ರೈ ಮಂದಾರ, ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಅರ್ಜುನ್ ಭಂಡಾರ್ಕಾರ್ ಅವರನ್ನು ಸನ್ಮಾನಿಸಲಾಯಿತು.ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಬಂಟ್ವಾಳ ಉಪವಿಭಾಗ ಡಿವೈಎಸ್ಪಿ ವೆಲಂಟೈನ್ ಡಿಸೋಜ, ಪೊಲೀಸರು ಮತ್ತು ಸಾರ್ವಜನಿಕರ ಸಂಬಂಧವೃದ್ಧಿಗೆ ಇಂಥ ಕಾರ್ಯಕ್ರಮಗಳು ಸಹಕಾರಿ ಎಂದರು.ಅತಿಥಿಗಳಾಗಿ ಬಂಟ್ವಾಳ ನಗರ ಠಾಣೆ ಪೊಲೀಸ್ ನಿರೀಕ್ಷಕ ಚೆಲುವರಾಜ್, ಬಂಟ್ವಾಳ ನಗರ ಠಾಣೆ ಎಸ್.ಐ. ಅವಿನಾಶ್ ಗೌಡ, ಗ್ರಾಮಾಂತರ ಠಾಣೆ ಎಸ್.ಐ. ಪ್ರಸನ್ನ ಕೆ, ಸಂಚಾರಿ ಠಾಣೆ ಎಸ್.ಐ. ರಾಜೇಶ್ ಎ.ಕೆ, ವಿಟ್ಲ ಠಾಣೆ ಎಸ್.ಐ. ವಿನೋದ್ ರೆಡ್ಡಿ, ಪುಂಜಾಲಕಟ್ಟೆ ಎಸ್.ಐ. ಸೌಮ್ಯಾ, ನಾಗೇಂದ್ರ ಬಾಳಿಗಾ ಅವರ ತಾಯಿ ರಮಣಿ ವಿ.ಬಾಳಿಗಾ, ಪತ್ನಿ ವಿದ್ಯಾ ಬಾಳಿಗಾ ಉಪಸ್ಥಿತರಿದ್ದರು. ಅಜೇಯ ಬಾಳಿಗಾ ಸ್ವಾಗತಿಸಿದರು.

ನಾಗೇಂದ್ರ ಬಾಳಿಗಾ ಅವರು ಕಾರ್ಯಕ್ರಮದ ಉದ್ದೇಶಗಳನ್ನು ವಿವರಿಸಿ ವಂದಿಸಿದರು. ಮಂಜು ವಿಟ್ಲ ಮತ್ತು ನಾರಾಯಣ ಕಾಮತ್ ಕಾರ್ಯಕ್ರಮ ನಿರೂಪಿಸಿದರು. ಇದೇ ಸಂದರ್ಭ ಬಂಟ್ವಾಳ ಡಿವೈಎಸ್ಪಿ ವೆಲಂಟೈನ್ ಡಿಸೋಜ ಅವರ ಜನ್ಮದಿನವನ್ನು ಆಚರಿಸಲಾಯಿತು. ಬಳಿಕ ಸಂಗೀತ ರಸಮಂಜರಿ ನಡೆಯಿತು.

More from the blog

ಬಂಟ್ವಾಳದ ನರಿಕೊಂಬು ಗ್ರಾಮದಲ್ಲಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

2024 ರ ಎ. 26 ರಂದು ನಡೆಯುವ ಲೋಕಸಭಾ ಚುನಾವಣೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರನ್ನು ಬಹುಮತದಿಂದ ಗೆಲ್ಲಿಸಿಕೊಡುವ ನಿಟ್ಟಿನಲ್ಲಿ "ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಗ್ರಾಮ,ಮನೆ,ಮನ ಸಂಪರ್ಕ ಅಭಿಯಾನ" ಎಂಬ...

ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ಆತ್ಮಹತ್ಯೆ

ಬಂಟ್ವಾಳ: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಫರಂಗಿಪೇಟೆಯಲ್ಲಿ ಮಹಿಳೆಯೊಬ್ಬರು ತಂದೆ ಹಾಗೂ ಪುತ್ರಿಯ ಮುಂದೆಯೇ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು‌ ನಡೆದಿದೆ. ಕುಮ್ಡೇಲು ನಿವಾಸಿ ಉಮೇಶ್ ಬೆಳ್ಚಡರ ಪತ್ನಿ...

ಲೋಕಸಭಾ ಚುನಾವಣೆ : ದಕ್ಷಿಣ ಕನ್ನಡ ಕ್ಷೇತ್ರದ ಸಂಯೋಜಕರನ್ನಾಗಿ ಅಬ್ದುಲ್ ರೆಹಮಾನ್ ಪಡ್ಪು ನೇಮಕ

ಲೋಕಸಭಾ ಚುನಾವಣೆಯ ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸಲು ಸಂಯೋಜಕರನ್ನಾಗಿ ಅಬ್ದುಲ್ ರೆಹಮಾನ್ ಪಡ್ಪು ಅವರನ್ನು ನೇಮಕ ಮಾಡಲಾಗಿದೆ.    

ವಿಟ್ಲ ಪೇಟೆಯಲ್ಲಿ ಕಾಂಗ್ರೆಸ್ ರೋಡ್ ಶೋ: ಸುಡುಬಿಸಿಲಿಗೂ ಜಗ್ಗದ ಉತ್ಸಾಹ

ವಿಟ್ಲ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರು ಮಂಗಳವಾರ ವಿಟ್ಲ ಪೇಟೆಯಲ್ಲಿ ರೋಡ್ ಶೋ ನಡೆಸಿ, ಪ್ರಚಾರ ಕಾರ್ಯ ನಡೆಸಿದರು. ಧಾರ್ಮಿಕ ಕೇಂದ್ರಗಳಲ್ಲಿ ವಿಶೇಷ ಪ್ರಾರ್ಥನೆ ನಡೆಸಿ, ಬಳಿಕ...