ಮುಂಬೈ: ಇಲ್ಲಿನ ವಿರಾರ್ ವೆಸ್ಟ್ ನ ವಿಜಯ್ ವಲ್ಲಭ ಕೋವಿಡ್ ಕೇರ್ ಆಸ್ಪತ್ರೆಯ ಐಸಿಯು ವಾರ್ಡ್ ನಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ 12 ಕೊರೊನಾ ಸೋಂಕಿತರು ಮೃತಪಟ್ಟಿದ್ದಾರೆ.
ಈ ಘಟನೆ ಇಂದು ಮುಂಜಾನೆ ನಡೆದಿದೆ. 3.15ರ ಸುಮಾರಿಗೆ ಬೆಂಕಿ ಕಾನಿಸಿಕೊಂಡಿದ್ದು ಅಸ್ಪತ್ರೆಯ ಐಸಿಯು ವಾರ್ಡ್ ನಲ್ಲಿ 17 ಕೊರೊನಾ ಸೋಂಕಿತರು ಚಿಕಿತ್ಸೆಗಾಗಿ ದಾಖಲಾಗಿದ್ದರು.
ಬೆಂಕಿ ದುರಂತದಲ್ಲಿ 12 ಜನರು ಮೃತಪಟ್ಟಿದ್ದು ಹಲವರು ಮಂದಿ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಬೇರೆ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ತಿಳಿದು ಬಂದಿದೆ.