Wednesday, April 10, 2024

ಸೇವಾಕಾರ್ಯಗಳಿಗೆ ಮತ್ತಷ್ಟು ಒತ್ತು: ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ಜಗತ್ತು ಕಂಡ ಪ್ರಭಾವಿ ನಾಯಕ ಪ್ರಧಾನಿ ನರೇಂದ್ರ ಮೋದಿ ಅವರ ಅಧಿಕಾರದ ೭ನೇ ವರ್ಷದ ಸಂಭ್ರಮವನ್ನು ಸೇವಾ ಕಾರ್ಯದ ಮೂಲಕ ಆಚರಣೆ ಮಾಡಬೇಕು ಎನ್ನುವ ನಿಟ್ಟಿನಲ್ಲಿ ಪಕ್ಷದ ಹಿರಿಯರ ಸೂಚನೆಯಂತೆ ಬಿಜೆಪಿ ಕಾರ್ಯಕರ್ತರು ಪೂರ್ಣ ಪ್ರಮಾಣದಲ್ಲಿ ತೊಡಗಿಕೊಂಡಿರುವುದು ಹೆಮ್ಮೆಯ ವಿಚಾರ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಹೇಳಿದರು.

ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಆಡಳಿತ ೭ನೇ ವರ್ಷಾಚರಣೆಯ ಸಂಭ್ರಮವಾಗಿ ಅನಂತಾಡಿ, ನೆಟ್ಲಮುಡ್ನೂರು, ಮಾಣಿ ಹಾಗೂ ಪೆರಾಜೆ ಗ್ರಾಮದ ಬಿಜೆಪಿ ಪಕ್ಷದ ವತಿಯಿಂದ ಅನಂತಾಡಿ ಗ್ರಾಮದ ಗೋಳಿಕಟ್ಟೆ ಜಂಕ್ಷನ್ ನಲ್ಲಿ ನಡೆದ ಸೇವಾಕಾರ್ಯಕ್ಕೆ ಚಾಲನೆ ನೀಡಿದರು.

ವಿಶ್ವ ಆರೋಗ್ಯ ಸಂಸ್ಥೆಯಿಂದಲೇ ಒಪ್ಪಿಗೆ ಪಡೆದ ಲಸಿಕೆಯ ಕುರಿತು ಸಾಕಷ್ಟು ಅಪಪ್ರಚಾರ ಮಾಡಿದವರಿಗೆ ಲಸಿಕೆ ಅನಿವಾರ್ಯತೆ ಏನು ಎಂಬುದನ್ನು ಪ್ರಧಾನಿಗಳು ತೋರಿಸಿಕೊಟ್ಟಿದ್ದಾರೆ. ಪಿಪಿಇ ಕಿಟ್, ಮಾಸ್ಕ್ ಗಳನ್ನು ತಯಾರು ಮಾಡಿ ವಿದೇಶಕ್ಕೆ ರಫ್ತು ಮಾಡಲಾಗುತ್ತಿದೆ.

ಬಂಟ್ವಾಳದಲ್ಲಿಯೂ ಕೊರೊನಾ ಎದುರಿಸಲು ಎಲ್ಲಾ ಸಿದ್ಧತೆ ಯಶಸ್ವಿಯಾಗಿ‌ ನಡೆದಿದ್ದು, ಕೊರೊನಾಕ್ಕೆ ಮೀಸಲಿಟ್ಟ ೧೫೫ ಬೆಡ್ ಗಳ ಪೈಕಿ ೨೬ ಮಂದಿ ಮಾತ್ರ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಕ್ಸಿಜನ್ ಬೆಡ್ ಗಳು ಕೂಡ ಬಂಟ್ವಾಳದಲ್ಲಿ ಖಾಲಿ ಇದೆ. ಬಂಟ್ವಾಳ ಸರ್ಕಾರಿ ಆಸ್ಪತ್ರೆಯಲ್ಲಿ ಗುಣಮಟ್ಟದ ಚಿಕಿತ್ಸೆ ಲಭ್ಯವಾಗಿತ್ತಿರುವುದು ನಮ್ಮ ಆಡಳಿತಕ್ಕೆ ಹಿಡಿದ ಕೈಗನ್ನಡಿಯಾಗಿದೆ. ವಿರೋಧಿಗಳು ಏನೇ ಹೇಳಿದರೂ, ನಮ್ಮ ಕೆಲಸಗಳು ನಿರಂತರವಾಗಿ‌ ನಡೆಯಬೇಕು ಎಂದರು.

ಕಾರ್ಯಕ್ರಮದಲ್ಲಿ ಅಂಗನವಾಡಿ ಕಾರ್ಯಕರ್ತೆಯರು- ಸಹಾಯಕಿಯರಿಗೆ ಅಕ್ಕಿ ವಿತರಣೆ, ಚಾಲಕರಿಗೆ ಸಹಾಯಧನದ ಸೇವಾಸಿಂಧು ನೋಂದಣಿಗೆ ಚಾಲನೆ, ಸಸಿ ವಿತರಣೆ- ನೆಡುವಿಕೆ, ಕೊರೊನಾ ಜಾಗೃತಿ ಪ್ರಚಾರ ಮೊದಲಾದ ೭ ಬಗೆಯ ಸೇವಾ ಕಾರ್ಯಕ್ಕೆ ಚಾಲನೆ ನೀಡಲಾಯಿತು.

ನೆಟ್ಲ ಮುಡ್ನೂರು ಗ್ರಾಮಪಂಚಾಯತ್ ಅಧ್ಯಕ್ಷ ಸತೀಶ್, ಅನಂತಾಡಿ ಗ್ರಾಮಪಂಚಾಯತ್ ಅಧ್ಯಕ್ಷ ಗಣೇಶ್ ಪೂಜಾರಿ, ಮಾಣಿ ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ರೊನಾಲ್ಡ್ ಡಿಸೋಜ, ಪ್ರಧಾನಕಾರ್ಯದರ್ಶಿ ಸನತ್ ಕುಮಾರ್, ನೇರಳಕಟ್ಟೆ ವ್ಯವಸಾಯ ಸಹಕಾರಿ ಕೇಂದ್ರದ ಅಧ್ಯಕ್ಷ ಪುಷ್ಪರಾಜ ಚೌಟ, ಉಪಾಧ್ಯಕ್ಷ ತನಿಯಪ್ಪ ಗೌಡ, ಮಾಜಿ ತಾ.ಪಂ.ಸದಸ್ಯೆ ಗೀತಾಚಂದ್ರಶೇಖರ್, ಪ್ರಮುಖರಾದ ಗಣೇಶ್ ರೈ ಮಾಣಿ, ಯಶವಂತ ನಾಯ್ಕ್ ನಗ್ರಿ, ನಾರಾಯಣ ಶೆಟ್ಟಿ ಮಾಣಿ, ಶಕೀಲ್ ನೆಟ್ಲ ಮುಡ್ನೂರು,ಅಶೋಕ್ ರೈ, ಧನಂಜಯ್, ಜಯಂತಿ, ಹರೀಶ್ಉಪಸ್ಥಿತರಿದ್ದರು. ದಿನೇಶ್ ಅನಂತಾಡಿ ಕಾರ್ಯಕ್ರಮ ನಿರ್ವಹಿಸಿದರು.

More from the blog

ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವುದು ಹೇಗೆ….?​ ಇಲ್ಲಿದೆ ಮಾಹಿತಿ

ಬೆಂಗಳೂರು: ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು, ಶೇ 81.15 ಮಂದಿ ಉತ್ತೀರ್ಣಗೊಂಡಿದ್ದಾರೆ. 2024ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ ವಿಭಾಗದಲ್ಲಿ 1,28,448 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ...

ದ್ವಿತೀಯ ಪಿಯು ಫಲಿತಾಂಶ ಪ್ರಕಟ : ದಕ್ಷಿಣ ಕನ್ನಡ ಜಿಲ್ಲೆಗೆ ಮೊದಲ ಸ್ಥಾನ

ಬೆಂಗಳೂರು: ಮಾರ್ಚ್ 1ರಿಂದ ಮಾರ್ಚ್ 22ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಬುಧವಾರ ಪ್ರಕಟಗೊಂಡಿದೆ. ಬೆಂಗಳೂರಿನಲ್ಲಿ ಶಿಕ್ಷಣ ಇಲಾಖೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದೆ. ಈ ಬಾರಿ, ಶೇ 81.15 ಮಂದಿ ಉತ್ತೀರ್ಣರಾಗಿದ್ದಾರೆ....

ಶಾಲಾ ಸಮುದಾಯದತ್ತ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

ಮಾಣಿ: ಶೈಕ್ಷಣಿಕ ವಿಚಾರಗಳ ಸಂಬಂಧಿತವಾದ ಒಳ್ಳೆಯ ಚಚೆ೯ಗಳು ಮೂಡಿಬಂದಾಗ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗೆ ಪೂರಕವಾದ ಕೆಲಸಗಳು ಮೂಡಲು ಸಾಧ್ಯ ‌. ಪ್ರತಿಯೊಬ್ಬ ವಿದ್ಯಾರ್ಥಿ, ಪೋಷಕರು,ತನ್ನ ಶಾಲೆಯ ಬಗ್ಗೆ ಒಳ್ಳೆಯ ಭಾವನೆ, ಸಂಬಂಧ ಇರಬೇಕು...

ಮೈಟ್ ಎಜುಕೇಶನ್ ಸಂಸ್ಥೆಯ ವತಿಯಿಂದ 2024ರ ಪ್ರಾಕ್ಟಿಕಲ್ ಪರೀಕ್ಷೆ

ಮಂಗಳೂರು ಹಾಗೂ ಬಿಸಿರೋಡ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ ಮೈಟ್ ಎಜುಕೇಶನ್ ಸಂಸ್ಥೆಯ ವತಿಯಿಂದ 2024ರ ಪ್ರಾಕ್ಟಿಕಲ್ ಪರೀಕ್ಷೆ ಸೋಮವಾರ ಬಿಸಿರೋಡ್ ಶಾಖೆಯಲ್ಲಿ ನಡೆಯಿತು. ಟೀಚರ್ಸ್ ಟ್ರೈನಿಂಗ್ ವಿಭಾಗದ ವಿದ್ಯಾರ್ಥಿನಿಯರಿಂದ ಪ್ರಸ್ತುತ ವರ್ಷದಲ್ಲಿ ತಯಾರಿಸಿದ ಎಲ್ಲಾ ಕಲಿಕಾ...